ಅಂಜಲಿ ಹತ್ಯೆ ಪ್ರಕರಣ: ನಂಬರ್ ಬ್ಲಾಕ್ ಮಾಡಿದಕ್ಕೆ  ಹತಾಶೆಗೊಂಡು ಕೊಲೆ: 494 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಸುಮಾರು 494 ಪುಟಗಳ ದೋಷಾರೋಪ ಪಟ್ಟಿಯನ್ನು ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಎಂ.ಎಚ್.ಉಮೇಶ ಅವರು ಇಲ್ಲಿನ 3ನೇ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.

ಗಿರೀಶ ಊರ್ಫ್ ವಿಶ್ವನಾಥ ಎಸ್. ಸಾವಂತ ಎಂಬಾತ ಅಂಜಲಿ ಅಂಬಿಗೇರ ಅವರನ್ನು ಹತ್ಯೆಗೈದಿದ್ದ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಒಪ್ಪಿಸಿತ್ತು. ಸಿಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 85 ಸಾಕ್ಷ್ಯಗಳನ್ನು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗುತ್ತಿದೆ.

ಸಿಸಿಟಿವಿ ದೃಶ್ಯಾವಳಿ, ಮರಣೋತ್ತರ ಪರೀಕ್ಷೆ ವರದಿ, ಎಫ್‌ಎಸ್ಎಲ್ ವರದಿ, ಮೊಬೈಲ್, ಹತ್ಯೆಗೆ ಬಳಕೆ  ಮಾಡಿದ ಚಾಕು ಇತ್ಯಾದಿಗಳು ಸಾಕ್ಷ್ಯದಲ್ಲಿ ಅಡಕವಾಗಿದ್ದು, ಕೊಲೆಯಾದ 98 ದಿನಗಳಲ್ಲಿ ಸಿಐಡಿ ತನಿಖೆ ನಡೆಸಿ ದೋಷಾರೋಪಣ ವರದಿ ಸಲ್ಲಿಕೆ ಮಾಡಿದೆ.

ಅಂಜಲಿ ಮೂರಾಲ್ಕು ಬಾರಿ ಮೈಸೂರಿಗೆ ಹೋಗಿ  ಗಿರೀಶನನ್ನು ಭೇಟಿಯಾಗಿದ್ದು, 2024ರ ಏಪ್ರಿಲ್‌ನಲ್ಲಿ ಇಬ್ಬರ ನಡುವೆ ಮನಸ್ತಾಪ, ಗಿರೀಶ ಮೊಬೈಲ್ ನಂಬರನ್ನು ಅಂಜಲಿ ಬ್ಲಾಕ್ ಮಾಡಿದ್ದರಿಂದ ಹತಾಶೆಗೊಂಡು ಮೇ 16ರಂದು  ಅಂಜಲಿಯನ್ನು ಹತ್ಯೆಗೈದಿದ್ದನ್ನು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ.

*ರೈಲ್ವೆ ಪೊಲೀಸರಿಗೆ ಸೆರೆ ಸಿಕ್ಕಿದ್ದ ಹಂತಕ*

ಅಂಜಲಿ ಕೊಲೆ ಮಾಡಿ ಸ್ಥಳೀಯ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಹಂತಕ ಗಿರೀಶ ಸಾವಂತ, ಮೇ 17ರಂದು ಮೈಸೂರಿನಿಂದ ಬೆಳಗಾವಿಗೆ ವಿಶ್ವಮಾನವ ರೈಲಿನಲ್ಲಿ ಪ್ರಯಾಣಿಸುವಾಗ ಮುಂಡರಗಿಯ ಮಹಿಳಾ ಪ್ರಯಾಣಿಕರೊಬ್ಬರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾನೆ. ಆಗ ಇನ್ನುಳಿದ ಪ್ರಯಾಣಿಕರಿಂದ ತಪ್ಪಿಸಿಕೊಳ್ಳಲು ಹೋದಾಗ ದಾವಣಗೆರೆ ಬಳಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ. ದಾವಣಗೆರೆ ರೈಲ್ವೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದರು.

*ಮೈಸೂರಿನಿಂದಲೇ ಚಾಕು-ಕ್ಯಾಪ್ ತಂದಿದ್ದ*

ಅಂಜಲಿಯಿಂದ ಬೇಸರಗೊಂಡು ಹತಾಶನಾಗಿದ್ದ ಗಿರೀಶ ಅವಳನ್ನು ಮುಗಿಸಬೇಕೆಂಬ ಉದ್ದೇಶದಿಂದ ತಾನು ಕೆಲಸ ಮಾಡುತ್ತಿದ್ದ ಮೈಸೂರಿನ ಹೋಟೆಲ್‌ನಿಂದ ಚಾಕು ತೆಗೆದುಕೊಂಡಿದ್ದಾನೆ. ಜೊತೆಗೆ ತನ್ನ ಸುಳಿವು ಸಿಗಬಾರದೆಂದು ಬಸ್ ನಿಲ್ದಾಣ ಬಳಿಯ ಫುಟ್‌ಪಾತ್‌ ಅಂಗಡಿಯಲ್ಲಿ ಮಾಸ್ಕ್ ಖರೀದಿಸಿದ್ದಾನೆ ಎನ್ನಲಾಗಿದೆ.

*ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್‌ ಸೇರಿ ನಾಲ್ವರು ಅಮಾನತು*

ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಿರ್ಲಕ್ಷ್ಯ ತೋರಿದ ಆಪಾದನೆಯಡಿ ರಾಜ್ಯ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ, ಹುಬ್ಬಳ್ಳಿ ದಕ್ಷಿಣ ಉಪ ವಿಭಾಗದ ಎಸಿಪಿ ಅವರನ್ನು ಅಮಾನತು ಮಾಡಿತ್ತು. ಅಂದಿನ ಪೊಲೀಸ್ ಆಯುಕ್ತರಾಗಿದ್ದ ರೇಣುಕಾ ಸುಕುಮಾರ್ ಬೆಂಡಿಗೇರಿ ಠಾಣೆಯ ಇನ್ಸ್‌ಪೆಕ್ಟರ್, ಮಹಿಳಾ ಮುಖ್ಯಪೇದೆ ಅವರನ್ನು ಅಮಾನತುಗೊಳಿಸಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago