ಅಂಜಲಿ ಹತ್ಯೆ ಪ್ರಕರಣ: ನಂಬರ್ ಬ್ಲಾಕ್ ಮಾಡಿದಕ್ಕೆ  ಹತಾಶೆಗೊಂಡು ಕೊಲೆ: 494 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಸುಮಾರು 494 ಪುಟಗಳ ದೋಷಾರೋಪ ಪಟ್ಟಿಯನ್ನು ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಎಂ.ಎಚ್.ಉಮೇಶ ಅವರು ಇಲ್ಲಿನ 3ನೇ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.

ಗಿರೀಶ ಊರ್ಫ್ ವಿಶ್ವನಾಥ ಎಸ್. ಸಾವಂತ ಎಂಬಾತ ಅಂಜಲಿ ಅಂಬಿಗೇರ ಅವರನ್ನು ಹತ್ಯೆಗೈದಿದ್ದ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಒಪ್ಪಿಸಿತ್ತು. ಸಿಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 85 ಸಾಕ್ಷ್ಯಗಳನ್ನು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗುತ್ತಿದೆ.

ಸಿಸಿಟಿವಿ ದೃಶ್ಯಾವಳಿ, ಮರಣೋತ್ತರ ಪರೀಕ್ಷೆ ವರದಿ, ಎಫ್‌ಎಸ್ಎಲ್ ವರದಿ, ಮೊಬೈಲ್, ಹತ್ಯೆಗೆ ಬಳಕೆ  ಮಾಡಿದ ಚಾಕು ಇತ್ಯಾದಿಗಳು ಸಾಕ್ಷ್ಯದಲ್ಲಿ ಅಡಕವಾಗಿದ್ದು, ಕೊಲೆಯಾದ 98 ದಿನಗಳಲ್ಲಿ ಸಿಐಡಿ ತನಿಖೆ ನಡೆಸಿ ದೋಷಾರೋಪಣ ವರದಿ ಸಲ್ಲಿಕೆ ಮಾಡಿದೆ.

ಅಂಜಲಿ ಮೂರಾಲ್ಕು ಬಾರಿ ಮೈಸೂರಿಗೆ ಹೋಗಿ  ಗಿರೀಶನನ್ನು ಭೇಟಿಯಾಗಿದ್ದು, 2024ರ ಏಪ್ರಿಲ್‌ನಲ್ಲಿ ಇಬ್ಬರ ನಡುವೆ ಮನಸ್ತಾಪ, ಗಿರೀಶ ಮೊಬೈಲ್ ನಂಬರನ್ನು ಅಂಜಲಿ ಬ್ಲಾಕ್ ಮಾಡಿದ್ದರಿಂದ ಹತಾಶೆಗೊಂಡು ಮೇ 16ರಂದು  ಅಂಜಲಿಯನ್ನು ಹತ್ಯೆಗೈದಿದ್ದನ್ನು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ.

*ರೈಲ್ವೆ ಪೊಲೀಸರಿಗೆ ಸೆರೆ ಸಿಕ್ಕಿದ್ದ ಹಂತಕ*

ಅಂಜಲಿ ಕೊಲೆ ಮಾಡಿ ಸ್ಥಳೀಯ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಹಂತಕ ಗಿರೀಶ ಸಾವಂತ, ಮೇ 17ರಂದು ಮೈಸೂರಿನಿಂದ ಬೆಳಗಾವಿಗೆ ವಿಶ್ವಮಾನವ ರೈಲಿನಲ್ಲಿ ಪ್ರಯಾಣಿಸುವಾಗ ಮುಂಡರಗಿಯ ಮಹಿಳಾ ಪ್ರಯಾಣಿಕರೊಬ್ಬರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾನೆ. ಆಗ ಇನ್ನುಳಿದ ಪ್ರಯಾಣಿಕರಿಂದ ತಪ್ಪಿಸಿಕೊಳ್ಳಲು ಹೋದಾಗ ದಾವಣಗೆರೆ ಬಳಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ. ದಾವಣಗೆರೆ ರೈಲ್ವೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದರು.

*ಮೈಸೂರಿನಿಂದಲೇ ಚಾಕು-ಕ್ಯಾಪ್ ತಂದಿದ್ದ*

ಅಂಜಲಿಯಿಂದ ಬೇಸರಗೊಂಡು ಹತಾಶನಾಗಿದ್ದ ಗಿರೀಶ ಅವಳನ್ನು ಮುಗಿಸಬೇಕೆಂಬ ಉದ್ದೇಶದಿಂದ ತಾನು ಕೆಲಸ ಮಾಡುತ್ತಿದ್ದ ಮೈಸೂರಿನ ಹೋಟೆಲ್‌ನಿಂದ ಚಾಕು ತೆಗೆದುಕೊಂಡಿದ್ದಾನೆ. ಜೊತೆಗೆ ತನ್ನ ಸುಳಿವು ಸಿಗಬಾರದೆಂದು ಬಸ್ ನಿಲ್ದಾಣ ಬಳಿಯ ಫುಟ್‌ಪಾತ್‌ ಅಂಗಡಿಯಲ್ಲಿ ಮಾಸ್ಕ್ ಖರೀದಿಸಿದ್ದಾನೆ ಎನ್ನಲಾಗಿದೆ.

*ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್‌ ಸೇರಿ ನಾಲ್ವರು ಅಮಾನತು*

ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಿರ್ಲಕ್ಷ್ಯ ತೋರಿದ ಆಪಾದನೆಯಡಿ ರಾಜ್ಯ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ, ಹುಬ್ಬಳ್ಳಿ ದಕ್ಷಿಣ ಉಪ ವಿಭಾಗದ ಎಸಿಪಿ ಅವರನ್ನು ಅಮಾನತು ಮಾಡಿತ್ತು. ಅಂದಿನ ಪೊಲೀಸ್ ಆಯುಕ್ತರಾಗಿದ್ದ ರೇಣುಕಾ ಸುಕುಮಾರ್ ಬೆಂಡಿಗೇರಿ ಠಾಣೆಯ ಇನ್ಸ್‌ಪೆಕ್ಟರ್, ಮಹಿಳಾ ಮುಖ್ಯಪೇದೆ ಅವರನ್ನು ಅಮಾನತುಗೊಳಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

6 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

16 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

18 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 days ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

2 days ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago