ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…