ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…