ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…