ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…