ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…