ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…