ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…