ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ: ಆರ್.ಆರ್. ನಗರದ SPARSH ಆಸ್ಪತ್ರೆಯಲ್ಲಿ 5 ವಿಶೇಷ ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

ಬೆಂಗಳೂರು, ಜುಲೈ 2026: ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ-2026ರ ಅಂಗವಾಗಿ, ಬೆಂಗಳೂರಿನ ಆರ್.ಆರ್. ನಗರದ ಸ್ಪರ್ಶ್ ಆಸ್ಪತ್ರೆ ಸಂಕೀರ್ಣ ಪುನರ್‌ನಿರ್ಮಾಣ, ಕಾರ್ಯಾತ್ಮಕ ಹಾಗೂ ಸೌಂದರ್ಯವರ್ಧಕ ಚಿಕಿತ್ಸೆಗಳ ಅಗತ್ಯವಿರುವ ರೋಗಿಗಳಿಗೆ ಸಮಗ್ರ ಹಾಗೂ ರೋಗಿಕೇಂದ್ರಿತ ಸೇವೆ ಒದಗಿಸುವ ಉದ್ದೇಶದಿಂದ ಐದು ಮಲ್ಟಿಡಿಸಿಪ್ಲಿನರಿ ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್ಸ್ ಆಫ್ ಎಕ್ಸಲೆನ್ಸ್ ಅನ್ನು ಆರಂಭಿಸಿದೆ.

ರೋಗಿಗಳಿಗೆ ಒಂದೇ ಸೂರಿನಡಿ ವಿವಿಧ ತಜ್ಞ ವೈದ್ಯರಿಂದ ಸಮಗ್ರ ಚಿಕಿತ್ಸೆ, ನಿಖರ ರೋಗನಿರ್ಣಯ ಹಾಗೂ ವೈಯಕ್ತಿಕ ಚಿಕಿತ್ಸಾ ಯೋಜನೆಗಳನ್ನು ಒದಗಿಸುವ ಉದ್ದೇಶದಿಂದ ಈ ವಿಶೇಷ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ. ಪ್ಲಾಸ್ಟಿಕ್ ಸರ್ಜರಿ, ಪುನರ್‌ನಿರ್ಮಾಣ ಶಸ್ತ್ರಚಿಕಿತ್ಸೆ ಹಾಗೂ ದೀರ್ಘಕಾಲದ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಯಲ್ಲಿ ಗುಣಮಟ್ಟದ ಸೇವೆ ನೀಡುವತ್ತ ಆಸ್ಪತ್ರೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ಹೊಸದಾಗಿ ಆರಂಭಿಸಲಾದ ಕ್ಲಿನಿಕ್‌ಗಳಲ್ಲಿ ಅಡ್ವಾನ್ಸ್ಡ್ ವೂಂಡ್ ಹೀಲಿಂಗ್ ಮತ್ತು ಲಿಂಬ್ ಸಾಲ್ವೇಜ್ ಕ್ಲಿನಿಕ್, ಅಡ್ವಾನ್ಸ್ಡ್ ಫೇಶಿಯಲ್ ಎಸ್ಥೆಟಿಕ್ಸ್ ಮತ್ತು ಕ್ರೇನಿಯೊ-ಮ್ಯಾಕ್ಸಿಲೋಫೇಶಿಯಲ್ ರಿಸ್ಟೋರೇಷನ್ ಕ್ಲಿನಿಕ್, ಅಡ್ವಾನ್ಸ್ಡ್ ಹ್ಯಾಂಡ್, ನರ್ವ್ ಮತ್ತು ಅಪರ್ ಲಿಂಬ್ ಕ್ಲಿನಿಕ್, ಬ್ರೆಸ್ಟ್ ಕ್ಲಿನಿಕ್ ಆಫ್ ಎಕ್ಸಲೆನ್ಸ್ ಹಾಗೂ ಸ್ಕಾರ್ ಕ್ಲಿನಿಕ್ ಆಫ್ ಎಕ್ಸಲೆನ್ಸ್ ಸೇರಿವೆ.

ಈ ಕ್ಲಿನಿಕ್‌ಗಳಲ್ಲಿ ಅನುಭವಿ ಪ್ಲಾಸ್ಟಿಕ್ ಸರ್ಜನ್‌ಗಳು ಹಾಗೂ ವಿವಿಧ ವೈದ್ಯಕೀಯ ವಿಭಾಗಗಳ ತಜ್ಞರು ಒಟ್ಟಾಗಿ ಸೇವೆ ನೀಡಲಿದ್ದಾರೆ. ಸಂಕೀರ್ಣ ಗಾಯಗಳ ಚಿಕಿತ್ಸೆ, ಗಾಯಗಳು ಶೀಘ್ರ ಗುಣಮುಖವಾಗುವಂತೆ ಮಾಡುವ ಚಿಕಿತ್ಸಾ ವಿಧಾನಗಳು, ಅಂಗಗಳನ್ನು ಉಳಿಸಿಕೊಳ್ಳುವ ಚಿಕಿತ್ಸೆಗಳು, ಕೈ ಮತ್ತು ನರಗಳ ಕಾರ್ಯಕ್ಷಮತೆಯ ಪುನಃಸ್ಥಾಪನೆ, ಸ್ತನ ಸಂಬಂಧಿತ ಆರೋಗ್ಯ ಸಮಸ್ಯೆಗಳು, ಗಾಯದ ಗುರುತುಗಳ ನಿರ್ವಹಣೆ ಹಾಗೂ ಮುಖದ ಪುನರ್‌ನಿರ್ಮಾಣ ಚಿಕಿತ್ಸೆಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

ವಿಶೇಷ ಉಪಕ್ರಮವಾಗಿ ಜುಲೈ 2026ರ ಅವಧಿಯಲ್ಲಿ ಈ ಐದು ಕ್ಲಿನಿಕ್ಸ್ ಆಫ್ ಎಕ್ಸಲೆನ್ಸ್‌ಗಳಲ್ಲಿ ಉಚಿತ ಮಲ್ಟಿಡಿಸಿಪ್ಲಿನರಿ ಮೌಲ್ಯಮಾಪನ ಸೌಲಭ್ಯವನ್ನು ಆಸ್ಪತ್ರೆ ಕಲ್ಪಿಸಿದೆ. ಜುಲೈ ನಂತರವೂ ಈ ಸೇವೆ ರಿಯಾಯಿತಿ ದರದಲ್ಲಿ ಲಭ್ಯವಿರಲಿದ್ದು, ವಿವಿಧ ವಿಭಾಗಗಳ ತಜ್ಞ ವೈದ್ಯರ ತಂಡದಿಂದ ರೋಗಿಗಳು ಸಮಗ್ರ ಆರೋಗ್ಯ ಮೌಲ್ಯಮಾಪನ ಹಾಗೂ ವೈಯಕ್ತಿಕ ಚಿಕಿತ್ಸಾ ಸಲಹೆ ಪಡೆಯಬಹುದಾಗಿದೆ..

ಈ ಹೊಸ ಸೇವೆಗಳ ಆರಂಭದೊಂದಿಗೆ ಸುಧಾರಿತ ಪ್ಲಾಸ್ಟಿಕ್ ಹಾಗೂ ರೀಕನ್‌ಸ್ಟ್ರಕ್ಟಿವ್ ಸರ್ಜರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸಿರುವ ಸ್ಪರ್ಶ್ ಆಸ್ಪತ್ರೆ, ರೋಗಿಗಳಿಗೆ ವೈಯಕ್ತಿಕ ಅಗತ್ಯಗಳಿಗೆ ತಕ್ಕ ಚಿಕಿತ್ಸೆ, ದೇಹದ ಕಾರ್ಯಕ್ಷಮತೆಯ ಪುನಃಸ್ಥಾಪನೆ ಹಾಗೂ ಉತ್ತಮ ಜೀವನಮಟ್ಟ ಕಲ್ಪಿಸುವತ್ತ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ.

ಅಪಾಯಿಂಟ್‌ಮೆಂಟ್ ಹಾಗೂ ಉಚಿತ ಮೌಲ್ಯಮಾಪನಕ್ಕಾಗಿ 080 6122 2000 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Ramesh Babu

Journalist

Recent Posts

ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ; ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರಿಂದ ಹಣ ಅಥವಾ ಲಂಚಕ್ಕೆ…

4 hours ago

ಮಕ್ಕಳ ನಡುವೆ ಕಾಣಿಸಿಕೊಂಡ 5 ಅಡಿ ನಾಗರಹಾವು: ಉರಗ ರಕ್ಷಕರಿಂದ ಸುರಕ್ಷಿತ ರಕ್ಷಣೆ: ಮಕ್ಕಳು ಸುರಕ್ಷಿತ

ಬೆಂಗಳೂರು: ಹೆಸರಘಟ್ಟ ಹೋಬಳಿಯ ತೋಟಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಸುಮಾರು 10.50ರ ವೇಳೆಗೆ ಮನೆಯೊಳಗೆ ನುಗ್ಗಿದ್ದ ಸುಮಾರು 5 ಅಡಿ…

9 hours ago

ಆಶ್ರಯ ನಿವೇಶನ ಹಂಚಿಕೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಕರವೇ ಪ್ರತಿಭಟನೆ

ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ಹಾಗೂ ವಸತಿ ಯೋಜನೆಯಡಿ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಗ್ರಾಮ…

23 hours ago

ಜು. 5 ಕ್ಕೆ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ- ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯು ಜುಲೈ 5 ಕ್ಕೆ…

23 hours ago

ರಾಮನಗರ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, 5 ಮಂದಿಗೆ ಗಂಭೀರ ಗಾಯ

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್‌ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ…

1 day ago

‘ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ’……..

ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ........ ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ.…

1 day ago