ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ: ಆರ್.ಆರ್. ನಗರದ SPARSH ಆಸ್ಪತ್ರೆಯಲ್ಲಿ 5 ವಿಶೇಷ ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

ಬೆಂಗಳೂರು, ಜುಲೈ 2026: ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ-2026ರ ಅಂಗವಾಗಿ, ಬೆಂಗಳೂರಿನ ಆರ್.ಆರ್. ನಗರದ ಸ್ಪರ್ಶ್ ಆಸ್ಪತ್ರೆ ಸಂಕೀರ್ಣ ಪುನರ್‌ನಿರ್ಮಾಣ, ಕಾರ್ಯಾತ್ಮಕ ಹಾಗೂ ಸೌಂದರ್ಯವರ್ಧಕ ಚಿಕಿತ್ಸೆಗಳ ಅಗತ್ಯವಿರುವ ರೋಗಿಗಳಿಗೆ ಸಮಗ್ರ ಹಾಗೂ ರೋಗಿಕೇಂದ್ರಿತ ಸೇವೆ ಒದಗಿಸುವ ಉದ್ದೇಶದಿಂದ ಐದು ಮಲ್ಟಿಡಿಸಿಪ್ಲಿನರಿ ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್ಸ್ ಆಫ್ ಎಕ್ಸಲೆನ್ಸ್ ಅನ್ನು ಆರಂಭಿಸಿದೆ.

ರೋಗಿಗಳಿಗೆ ಒಂದೇ ಸೂರಿನಡಿ ವಿವಿಧ ತಜ್ಞ ವೈದ್ಯರಿಂದ ಸಮಗ್ರ ಚಿಕಿತ್ಸೆ, ನಿಖರ ರೋಗನಿರ್ಣಯ ಹಾಗೂ ವೈಯಕ್ತಿಕ ಚಿಕಿತ್ಸಾ ಯೋಜನೆಗಳನ್ನು ಒದಗಿಸುವ ಉದ್ದೇಶದಿಂದ ಈ ವಿಶೇಷ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ. ಪ್ಲಾಸ್ಟಿಕ್ ಸರ್ಜರಿ, ಪುನರ್‌ನಿರ್ಮಾಣ ಶಸ್ತ್ರಚಿಕಿತ್ಸೆ ಹಾಗೂ ದೀರ್ಘಕಾಲದ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಯಲ್ಲಿ ಗುಣಮಟ್ಟದ ಸೇವೆ ನೀಡುವತ್ತ ಆಸ್ಪತ್ರೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ಹೊಸದಾಗಿ ಆರಂಭಿಸಲಾದ ಕ್ಲಿನಿಕ್‌ಗಳಲ್ಲಿ ಅಡ್ವಾನ್ಸ್ಡ್ ವೂಂಡ್ ಹೀಲಿಂಗ್ ಮತ್ತು ಲಿಂಬ್ ಸಾಲ್ವೇಜ್ ಕ್ಲಿನಿಕ್, ಅಡ್ವಾನ್ಸ್ಡ್ ಫೇಶಿಯಲ್ ಎಸ್ಥೆಟಿಕ್ಸ್ ಮತ್ತು ಕ್ರೇನಿಯೊ-ಮ್ಯಾಕ್ಸಿಲೋಫೇಶಿಯಲ್ ರಿಸ್ಟೋರೇಷನ್ ಕ್ಲಿನಿಕ್, ಅಡ್ವಾನ್ಸ್ಡ್ ಹ್ಯಾಂಡ್, ನರ್ವ್ ಮತ್ತು ಅಪರ್ ಲಿಂಬ್ ಕ್ಲಿನಿಕ್, ಬ್ರೆಸ್ಟ್ ಕ್ಲಿನಿಕ್ ಆಫ್ ಎಕ್ಸಲೆನ್ಸ್ ಹಾಗೂ ಸ್ಕಾರ್ ಕ್ಲಿನಿಕ್ ಆಫ್ ಎಕ್ಸಲೆನ್ಸ್ ಸೇರಿವೆ.

ಈ ಕ್ಲಿನಿಕ್‌ಗಳಲ್ಲಿ ಅನುಭವಿ ಪ್ಲಾಸ್ಟಿಕ್ ಸರ್ಜನ್‌ಗಳು ಹಾಗೂ ವಿವಿಧ ವೈದ್ಯಕೀಯ ವಿಭಾಗಗಳ ತಜ್ಞರು ಒಟ್ಟಾಗಿ ಸೇವೆ ನೀಡಲಿದ್ದಾರೆ. ಸಂಕೀರ್ಣ ಗಾಯಗಳ ಚಿಕಿತ್ಸೆ, ಗಾಯಗಳು ಶೀಘ್ರ ಗುಣಮುಖವಾಗುವಂತೆ ಮಾಡುವ ಚಿಕಿತ್ಸಾ ವಿಧಾನಗಳು, ಅಂಗಗಳನ್ನು ಉಳಿಸಿಕೊಳ್ಳುವ ಚಿಕಿತ್ಸೆಗಳು, ಕೈ ಮತ್ತು ನರಗಳ ಕಾರ್ಯಕ್ಷಮತೆಯ ಪುನಃಸ್ಥಾಪನೆ, ಸ್ತನ ಸಂಬಂಧಿತ ಆರೋಗ್ಯ ಸಮಸ್ಯೆಗಳು, ಗಾಯದ ಗುರುತುಗಳ ನಿರ್ವಹಣೆ ಹಾಗೂ ಮುಖದ ಪುನರ್‌ನಿರ್ಮಾಣ ಚಿಕಿತ್ಸೆಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

ವಿಶೇಷ ಉಪಕ್ರಮವಾಗಿ ಜುಲೈ 2026ರ ಅವಧಿಯಲ್ಲಿ ಈ ಐದು ಕ್ಲಿನಿಕ್ಸ್ ಆಫ್ ಎಕ್ಸಲೆನ್ಸ್‌ಗಳಲ್ಲಿ ಉಚಿತ ಮಲ್ಟಿಡಿಸಿಪ್ಲಿನರಿ ಮೌಲ್ಯಮಾಪನ ಸೌಲಭ್ಯವನ್ನು ಆಸ್ಪತ್ರೆ ಕಲ್ಪಿಸಿದೆ. ಜುಲೈ ನಂತರವೂ ಈ ಸೇವೆ ರಿಯಾಯಿತಿ ದರದಲ್ಲಿ ಲಭ್ಯವಿರಲಿದ್ದು, ವಿವಿಧ ವಿಭಾಗಗಳ ತಜ್ಞ ವೈದ್ಯರ ತಂಡದಿಂದ ರೋಗಿಗಳು ಸಮಗ್ರ ಆರೋಗ್ಯ ಮೌಲ್ಯಮಾಪನ ಹಾಗೂ ವೈಯಕ್ತಿಕ ಚಿಕಿತ್ಸಾ ಸಲಹೆ ಪಡೆಯಬಹುದಾಗಿದೆ..

ಈ ಹೊಸ ಸೇವೆಗಳ ಆರಂಭದೊಂದಿಗೆ ಸುಧಾರಿತ ಪ್ಲಾಸ್ಟಿಕ್ ಹಾಗೂ ರೀಕನ್‌ಸ್ಟ್ರಕ್ಟಿವ್ ಸರ್ಜರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸಿರುವ ಸ್ಪರ್ಶ್ ಆಸ್ಪತ್ರೆ, ರೋಗಿಗಳಿಗೆ ವೈಯಕ್ತಿಕ ಅಗತ್ಯಗಳಿಗೆ ತಕ್ಕ ಚಿಕಿತ್ಸೆ, ದೇಹದ ಕಾರ್ಯಕ್ಷಮತೆಯ ಪುನಃಸ್ಥಾಪನೆ ಹಾಗೂ ಉತ್ತಮ ಜೀವನಮಟ್ಟ ಕಲ್ಪಿಸುವತ್ತ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ.

ಅಪಾಯಿಂಟ್‌ಮೆಂಟ್ ಹಾಗೂ ಉಚಿತ ಮೌಲ್ಯಮಾಪನಕ್ಕಾಗಿ 080 6122 2000 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

22 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago