ಅಂತಾರಾಜ್ಯ ಗಾಂಜಾ‌ ಪೆಡ್ಲರ್ ನ ಹೆಡೆಮುರಿ ಕಟ್ಟಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಸಿಬ್ಬಂದಿ

 

ನಗರದ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಗೀತಂ ಕಾಲೇಜ್ ಸಮೀಪದಲ್ಲಿ ಗಾಂಜಾ ಸೋಪ್ಪು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಂತಾರಾಜ್ಯ ಗಾಂಜಾ‌ ಪೆಡ್ಲರ್ ನನ್ನು ಇನ್ಸ್‌ಪೆಕ್ಟರ್ ಮುನಿಕೃಷ್ಣ ನೇತೃತ್ವದ ಗ್ರಾಮಾಂತರ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬಂಧಿತನನ್ನು ಹಿಂದೂಪುರ ತಾಲೂಕಿನ ಮಾನೆಪಲ್ಲಿ ಗ್ರಾಮದ ಶಿವಪ್ಪ (25) ಎನ್ನಲಾಗಿದ್ದು, ಈತನಿಂದ 7 ಲಕ್ಷ ರೂ. ಮೌಲ್ಯದ 9 ಕೆ.ಜಿ 580 ಗ್ರಾಂ ತೂಕದ ಗಾಂಜಾ ಸೋಪ್ಪು, ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯನ್ನು ಸಂಗ್ರಹಿಸಿ, ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್‍ಪಿ ನಾಗರಾಜು ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಮುನಿಕೃಷ್ಣ, ಸಬ್ ಇನ್ಸ್‌ಪೆಕ್ಟರ್ ಪಂಕಜಾ, ಸಿಬ್ಬಂದಿಗಳಾದ ದತ್ತಾತ್ರೇಯ, ಅರ್ಜುನ್ ಲಮಾಣಿ, ವೆಂಕಟೇಶ್ ಕುಮಾರ್, ಗಂಗಯ್ಯ, ಹನುಮಂತರಾಜು, ಸಚಿನ ಉಪ್ಪಾರ ಕಾರ್ಯಾಚರಣೆ ನಡೆಸಿ, ಮಾದಕ ವಸ್ತು ಗಾಂಜಾವನ್ನು ಜನರಿಗೆ ಮಾರಾಟ ಮಾಡಿ ಸಮಾಜದಲ್ಲಿ ದುಷ್ಪರಿಣಾಮ ಉಂಟುಮಾಡುವ ಆಸಾಮಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

39 minutes ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

5 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

7 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

10 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

11 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

22 hours ago