ನಗರದ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಗೀತಂ ಕಾಲೇಜ್ ಸಮೀಪದಲ್ಲಿ ಗಾಂಜಾ ಸೋಪ್ಪು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಂತಾರಾಜ್ಯ ಗಾಂಜಾ ಪೆಡ್ಲರ್ ನನ್ನು ಇನ್ಸ್ಪೆಕ್ಟರ್ ಮುನಿಕೃಷ್ಣ ನೇತೃತ್ವದ ಗ್ರಾಮಾಂತರ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತನನ್ನು ಹಿಂದೂಪುರ ತಾಲೂಕಿನ ಮಾನೆಪಲ್ಲಿ ಗ್ರಾಮದ ಶಿವಪ್ಪ (25) ಎನ್ನಲಾಗಿದ್ದು, ಈತನಿಂದ 7 ಲಕ್ಷ ರೂ. ಮೌಲ್ಯದ 9 ಕೆ.ಜಿ 580 ಗ್ರಾಂ ತೂಕದ ಗಾಂಜಾ ಸೋಪ್ಪು, ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯನ್ನು ಸಂಗ್ರಹಿಸಿ, ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ನಾಗರಾಜು ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮುನಿಕೃಷ್ಣ, ಸಬ್ ಇನ್ಸ್ಪೆಕ್ಟರ್ ಪಂಕಜಾ, ಸಿಬ್ಬಂದಿಗಳಾದ ದತ್ತಾತ್ರೇಯ, ಅರ್ಜುನ್ ಲಮಾಣಿ, ವೆಂಕಟೇಶ್ ಕುಮಾರ್, ಗಂಗಯ್ಯ, ಹನುಮಂತರಾಜು, ಸಚಿನ ಉಪ್ಪಾರ ಕಾರ್ಯಾಚರಣೆ ನಡೆಸಿ, ಮಾದಕ ವಸ್ತು ಗಾಂಜಾವನ್ನು ಜನರಿಗೆ ಮಾರಾಟ ಮಾಡಿ ಸಮಾಜದಲ್ಲಿ ದುಷ್ಪರಿಣಾಮ ಉಂಟುಮಾಡುವ ಆಸಾಮಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…