ಅಂತಾರಾಜ್ಯ ಮನೆಗಳ್ಳರ ಬಂಧನ: ₹11.42 ಲಕ್ಷ ಮೌಲ್ಯದ ಕಳವು ಮಾಲು ವಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹11.42 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಜೂನ್ 15ರಂದು ಸರಳಾ ಚಂದ್ರಶೇಖರ್ ಅವರು ತಮ್ಮ ಮನೆಯಲ್ಲಿ ಚಿನ್ನದ ಮಾಂಗಲ್ಯ ಸರ, ನೆಕ್‌ಲೇಸ್, ನಗದು ಹಣ ಹಾಗೂ ಬೈಕ್ ಕಳುವಾಗಿರುವ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಎಂ.ವಿ. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ವೆಂಕಟೇಶ್ ಪ್ರಸನ್ನ, ಲಕ್ಷ್ಮೀನಾರಾಯಣ ಎ.ವಿ. ಹಾಗೂ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್‌ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, ಬಿಹಾರದ ಖಾಗರಿಯಾ ಜಿಲ್ಲೆಯ ಗೋಗರಿ ತಾಲ್ಲೂಕಿನ ಕಾಜಿಚಾಕ್ ಗ್ರಾಮದ ನಿವಾಸಿಗಳಾದ ಗೌರವ್ ಕುಮಾರ್ (19) ಹಾಗೂ ವಿಶಾಲ್ ಕುಮಾರ್ (22) ಅವರನ್ನು ಬಂಧಿಸಿದೆ.

ಬಂಧಿತರಿಂದ ₹9.75 ಲಕ್ಷ ಮೌಲ್ಯದ 85 ಗ್ರಾಂ ಚಿನ್ನಾಭರಣ, ₹67 ಸಾವಿರ ನಗದು ಹಣ ಹಾಗೂ ಸುಮಾರು ₹1 ಲಕ್ಷ ಮೌಲ್ಯದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ₹11.42 ಲಕ್ಷ ಮೌಲ್ಯದ ಕಳವು ಮಾಲು ಪತ್ತೆಹಚ್ಚಿ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ನಾರಾಯಣಸ್ವಾಮಿ, ಪ್ರೊಬೆಷನರಿ ಪಿಎಸ್‌ಐ ಸುಮಂತ್, ಹೆಡ್ ಕಾನ್ಸ್‌ಟೇಬಲ್‌ಗಳಾದ ರಂಗನಾಥ್, ಸುನಿಲ್ ಭಾಸಗಿ, ಹರೀಶ್, ಮಂಜುನಾಥ್, ಚಂದ್ರಶೇಖರ್, ಸಹಾಯಕ ಹೆಡ್ ಕಾನ್ಸ್‌ಟೇಬಲ್ ನಟರಾಜು, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಉಪ್ಪಾರ ಹಾಗೂ ತಾಂತ್ರಿಕ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಪ್ರಕರಣದ ಯಶಸ್ವಿ ತನಿಖೆ ಮತ್ತು ಕಳವು ಮಾಲು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

14 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago