ಅಂತಾರಾಜ್ಯ ಮನೆಗಳ್ಳರ ಬಂಧನ: ₹11.42 ಲಕ್ಷ ಮೌಲ್ಯದ ಕಳವು ಮಾಲು ವಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹11.42 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಜೂನ್ 15ರಂದು ಸರಳಾ ಚಂದ್ರಶೇಖರ್ ಅವರು ತಮ್ಮ ಮನೆಯಲ್ಲಿ ಚಿನ್ನದ ಮಾಂಗಲ್ಯ ಸರ, ನೆಕ್‌ಲೇಸ್, ನಗದು ಹಣ ಹಾಗೂ ಬೈಕ್ ಕಳುವಾಗಿರುವ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಎಂ.ವಿ. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ವೆಂಕಟೇಶ್ ಪ್ರಸನ್ನ, ಲಕ್ಷ್ಮೀನಾರಾಯಣ ಎ.ವಿ. ಹಾಗೂ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್‌ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, ಬಿಹಾರದ ಖಾಗರಿಯಾ ಜಿಲ್ಲೆಯ ಗೋಗರಿ ತಾಲ್ಲೂಕಿನ ಕಾಜಿಚಾಕ್ ಗ್ರಾಮದ ನಿವಾಸಿಗಳಾದ ಗೌರವ್ ಕುಮಾರ್ (19) ಹಾಗೂ ವಿಶಾಲ್ ಕುಮಾರ್ (22) ಅವರನ್ನು ಬಂಧಿಸಿದೆ.

ಬಂಧಿತರಿಂದ ₹9.75 ಲಕ್ಷ ಮೌಲ್ಯದ 85 ಗ್ರಾಂ ಚಿನ್ನಾಭರಣ, ₹67 ಸಾವಿರ ನಗದು ಹಣ ಹಾಗೂ ಸುಮಾರು ₹1 ಲಕ್ಷ ಮೌಲ್ಯದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ₹11.42 ಲಕ್ಷ ಮೌಲ್ಯದ ಕಳವು ಮಾಲು ಪತ್ತೆಹಚ್ಚಿ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ನಾರಾಯಣಸ್ವಾಮಿ, ಪ್ರೊಬೆಷನರಿ ಪಿಎಸ್‌ಐ ಸುಮಂತ್, ಹೆಡ್ ಕಾನ್ಸ್‌ಟೇಬಲ್‌ಗಳಾದ ರಂಗನಾಥ್, ಸುನಿಲ್ ಭಾಸಗಿ, ಹರೀಶ್, ಮಂಜುನಾಥ್, ಚಂದ್ರಶೇಖರ್, ಸಹಾಯಕ ಹೆಡ್ ಕಾನ್ಸ್‌ಟೇಬಲ್ ನಟರಾಜು, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಉಪ್ಪಾರ ಹಾಗೂ ತಾಂತ್ರಿಕ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಪ್ರಕರಣದ ಯಶಸ್ವಿ ತನಿಖೆ ಮತ್ತು ಕಳವು ಮಾಲು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

4 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

6 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

12 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

13 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago