ಯೂತ್ ಗೇಮ್ಸ್ ಕೌನ್ಸಿಲ್ ಇಂಡಿಯಾ ವತಿಯಿಂದ ನೇಪಾಳದ ರಂಗಸಾಲ ಕ್ರೀಡಾಂಗಣ ಪೋಕರಾದಲ್ಲಿ 2022 -2023ನೆ ಸಾಲಿನ ಅಂತರರಾಷ್ಟ್ರೀಯ ಕ್ರೀಡಾಕೂಟ ನಡೆಯಿತು.
ಈ ಕ್ರೀಡಾಕೂಟದಲ್ಲಿ 3 ಸಾವಿರ ಮತ್ತು 5 ಸಾವಿರ ಮೀಟರ್ ಓಟದ ವಿಭಾಗದಲ್ಲಿ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿ ಲಿಖಿಶ್ .ವಿ ಎರಡು ಚಿನ್ನದ ಪದಕಗಳನ್ನು ಪಡೆದು ಸೌತ್ ಏಷಿಯನ್ ಯೂತ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ.
ಯೂತ್ ಗೇಮ್ಸ್ ಇಂಡೋ ನೇಪಾಳ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಎರಡು ಚಿನ್ನದ ಪದಕ ಪಡೆದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ
ಈ ಸಾಧಕ ವಿದ್ಯಾರ್ಥಿಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಜಿ.ಎಚ್ ನಾಗರಾಜ್, ಉಪಾಧ್ಯಕ್ಷರಾದ ಜೆ. ರಾಜೇಂದ್ರ, ಆಡಳಿತ ಮಂಡಳಿಯ ನಿರ್ದೇಶಕರುಗಳು, ಎಚ್.ಆರ್ ಮ್ಯಾನೇಜರ್ ಬಾಬುರೆಡ್ಡಿ , ಸೇರಿದಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ.ನಾಗರಾಜ್, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ. ಉಪಪ್ರಾಂಶುಪಾಲರಾದ ಕೆ. ದಕ್ಷಿಣಮೂರ್ತಿ ಸೇರಿದಂತೆ
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…