ಅಂತಾರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜುಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ

ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತಾರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು ” ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗ ದೊಂದಿಗೆ, ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ” ಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ “ಪೋಟೋ
ಟುಡೇ ವಸ್ತು ಪ್ರದರ್ಶನದಲ್ಲಿ “ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ರಾಜು ರವರಿಗೆ ಕನ್ನಡ ಚಿತ್ರರಂಗದ ನಟ ಪ್ರತಮ್ ಅವರು ವಿತರಿಸಿ,ಗೌರವಿಸಿದರು.

ಶುಕ್ರವಾರ ರಾಜಧಾನಿಯಲ್ಲಿ ನಡೆದ ಮೊದಲ ದಿನದ ವಸ್ತು ಪ್ರದರ್ಶನದಲ್ಲಿ ಒಟ್ಟು ಏಳು ಮಂದಿ ಮಹಿಳಾ ಛಾಯಾಗ್ರಾಹಕಿಯರು ಸೇರಿದಂತೆ 52ಮಂದಿ ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೊಡ್ಡಬಳ್ಳಾಪುರ ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ಮಂಜುನಾಥ್ ಸ್ಟುಡಿಯೋ ಮಾಲೀಕರಾದ ಜಿ.ರಾಜು ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶ್ನಿಸ್ತಿ ಸ್ವೀಕರಿಸಿದ ರಾಜು ರವರು ಮಾದ್ಯಮ ದೊಂದಿಗೆ ಮಾತನಾಡುತ್ತಾ ಛಾಯಾಚಿತ್ರ ಕಲೆಯನ್ನು ಕಲಿಸಿದ ಗುರುಗಳಿಗೆ ಹಾಗೂ ನನ್ನ ಗ್ರಾಹಕರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದೆಂದರು.

ಕಾರ್ಯಕ್ರಮದಲ್ಲಿ ಕಿರುತೆರೆ ನಟ ವಿಕ್ರಂ ಸೂರಿ, ಸಿನಿಮಾಟೋಗ್ರಾಫರ್ ಜಿಜಿ ಕೃಷ್ಣ, ನಿಕಾನ್ ಮುಖ್ಯಸ್ಥ ಸಜ್ಜನ್,ಕೆವಿಪಿಎ ಅಧ್ಯಕ್ಷ ಬೆಂಜಮಿನ್, ಪದಾಧಿಕಾರಿಗಳಾದ ಕೃಷ್ಣಪ್ಪ, ಜಗದೀಶ್ ಮತ್ತಿತರರಿದ್ದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

4 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

5 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

7 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

8 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

17 hours ago