ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತಾರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು ” ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗ ದೊಂದಿಗೆ, ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ” ಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ “ಪೋಟೋ
ಟುಡೇ ವಸ್ತು ಪ್ರದರ್ಶನದಲ್ಲಿ “ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ರಾಜು ರವರಿಗೆ ಕನ್ನಡ ಚಿತ್ರರಂಗದ ನಟ ಪ್ರತಮ್ ಅವರು ವಿತರಿಸಿ,ಗೌರವಿಸಿದರು.
ಶುಕ್ರವಾರ ರಾಜಧಾನಿಯಲ್ಲಿ ನಡೆದ ಮೊದಲ ದಿನದ ವಸ್ತು ಪ್ರದರ್ಶನದಲ್ಲಿ ಒಟ್ಟು ಏಳು ಮಂದಿ ಮಹಿಳಾ ಛಾಯಾಗ್ರಾಹಕಿಯರು ಸೇರಿದಂತೆ 52ಮಂದಿ ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದೊಡ್ಡಬಳ್ಳಾಪುರ ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ಮಂಜುನಾಥ್ ಸ್ಟುಡಿಯೋ ಮಾಲೀಕರಾದ ಜಿ.ರಾಜು ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶ್ನಿಸ್ತಿ ಸ್ವೀಕರಿಸಿದ ರಾಜು ರವರು ಮಾದ್ಯಮ ದೊಂದಿಗೆ ಮಾತನಾಡುತ್ತಾ ಛಾಯಾಚಿತ್ರ ಕಲೆಯನ್ನು ಕಲಿಸಿದ ಗುರುಗಳಿಗೆ ಹಾಗೂ ನನ್ನ ಗ್ರಾಹಕರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದೆಂದರು.
ಕಾರ್ಯಕ್ರಮದಲ್ಲಿ ಕಿರುತೆರೆ ನಟ ವಿಕ್ರಂ ಸೂರಿ, ಸಿನಿಮಾಟೋಗ್ರಾಫರ್ ಜಿಜಿ ಕೃಷ್ಣ, ನಿಕಾನ್ ಮುಖ್ಯಸ್ಥ ಸಜ್ಜನ್,ಕೆವಿಪಿಎ ಅಧ್ಯಕ್ಷ ಬೆಂಜಮಿನ್, ಪದಾಧಿಕಾರಿಗಳಾದ ಕೃಷ್ಣಪ್ಪ, ಜಗದೀಶ್ ಮತ್ತಿತರರಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…