ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತಾರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು ” ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗ ದೊಂದಿಗೆ, ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ” ಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ “ಪೋಟೋ
ಟುಡೇ ವಸ್ತು ಪ್ರದರ್ಶನದಲ್ಲಿ “ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ರಾಜು ರವರಿಗೆ ಕನ್ನಡ ಚಿತ್ರರಂಗದ ನಟ ಪ್ರತಮ್ ಅವರು ವಿತರಿಸಿ,ಗೌರವಿಸಿದರು.
ಶುಕ್ರವಾರ ರಾಜಧಾನಿಯಲ್ಲಿ ನಡೆದ ಮೊದಲ ದಿನದ ವಸ್ತು ಪ್ರದರ್ಶನದಲ್ಲಿ ಒಟ್ಟು ಏಳು ಮಂದಿ ಮಹಿಳಾ ಛಾಯಾಗ್ರಾಹಕಿಯರು ಸೇರಿದಂತೆ 52ಮಂದಿ ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದೊಡ್ಡಬಳ್ಳಾಪುರ ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ಮಂಜುನಾಥ್ ಸ್ಟುಡಿಯೋ ಮಾಲೀಕರಾದ ಜಿ.ರಾಜು ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶ್ನಿಸ್ತಿ ಸ್ವೀಕರಿಸಿದ ರಾಜು ರವರು ಮಾದ್ಯಮ ದೊಂದಿಗೆ ಮಾತನಾಡುತ್ತಾ ಛಾಯಾಚಿತ್ರ ಕಲೆಯನ್ನು ಕಲಿಸಿದ ಗುರುಗಳಿಗೆ ಹಾಗೂ ನನ್ನ ಗ್ರಾಹಕರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದೆಂದರು.
ಕಾರ್ಯಕ್ರಮದಲ್ಲಿ ಕಿರುತೆರೆ ನಟ ವಿಕ್ರಂ ಸೂರಿ, ಸಿನಿಮಾಟೋಗ್ರಾಫರ್ ಜಿಜಿ ಕೃಷ್ಣ, ನಿಕಾನ್ ಮುಖ್ಯಸ್ಥ ಸಜ್ಜನ್,ಕೆವಿಪಿಎ ಅಧ್ಯಕ್ಷ ಬೆಂಜಮಿನ್, ಪದಾಧಿಕಾರಿಗಳಾದ ಕೃಷ್ಣಪ್ಪ, ಜಗದೀಶ್ ಮತ್ತಿತರರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…