ಅಂತಾರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜುಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ

ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತಾರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು ” ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗ ದೊಂದಿಗೆ, ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ” ಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ “ಪೋಟೋ
ಟುಡೇ ವಸ್ತು ಪ್ರದರ್ಶನದಲ್ಲಿ “ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ರಾಜು ರವರಿಗೆ ಕನ್ನಡ ಚಿತ್ರರಂಗದ ನಟ ಪ್ರತಮ್ ಅವರು ವಿತರಿಸಿ,ಗೌರವಿಸಿದರು.

ಶುಕ್ರವಾರ ರಾಜಧಾನಿಯಲ್ಲಿ ನಡೆದ ಮೊದಲ ದಿನದ ವಸ್ತು ಪ್ರದರ್ಶನದಲ್ಲಿ ಒಟ್ಟು ಏಳು ಮಂದಿ ಮಹಿಳಾ ಛಾಯಾಗ್ರಾಹಕಿಯರು ಸೇರಿದಂತೆ 52ಮಂದಿ ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೊಡ್ಡಬಳ್ಳಾಪುರ ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ಮಂಜುನಾಥ್ ಸ್ಟುಡಿಯೋ ಮಾಲೀಕರಾದ ಜಿ.ರಾಜು ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶ್ನಿಸ್ತಿ ಸ್ವೀಕರಿಸಿದ ರಾಜು ರವರು ಮಾದ್ಯಮ ದೊಂದಿಗೆ ಮಾತನಾಡುತ್ತಾ ಛಾಯಾಚಿತ್ರ ಕಲೆಯನ್ನು ಕಲಿಸಿದ ಗುರುಗಳಿಗೆ ಹಾಗೂ ನನ್ನ ಗ್ರಾಹಕರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದೆಂದರು.

ಕಾರ್ಯಕ್ರಮದಲ್ಲಿ ಕಿರುತೆರೆ ನಟ ವಿಕ್ರಂ ಸೂರಿ, ಸಿನಿಮಾಟೋಗ್ರಾಫರ್ ಜಿಜಿ ಕೃಷ್ಣ, ನಿಕಾನ್ ಮುಖ್ಯಸ್ಥ ಸಜ್ಜನ್,ಕೆವಿಪಿಎ ಅಧ್ಯಕ್ಷ ಬೆಂಜಮಿನ್, ಪದಾಧಿಕಾರಿಗಳಾದ ಕೃಷ್ಣಪ್ಪ, ಜಗದೀಶ್ ಮತ್ತಿತರರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

5 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

6 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

12 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

23 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

24 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago