ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತಾರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು ” ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗ ದೊಂದಿಗೆ, ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ” ಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ “ಪೋಟೋ
ಟುಡೇ ವಸ್ತು ಪ್ರದರ್ಶನದಲ್ಲಿ “ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ರಾಜು ರವರಿಗೆ ಕನ್ನಡ ಚಿತ್ರರಂಗದ ನಟ ಪ್ರತಮ್ ಅವರು ವಿತರಿಸಿ,ಗೌರವಿಸಿದರು.
ಶುಕ್ರವಾರ ರಾಜಧಾನಿಯಲ್ಲಿ ನಡೆದ ಮೊದಲ ದಿನದ ವಸ್ತು ಪ್ರದರ್ಶನದಲ್ಲಿ ಒಟ್ಟು ಏಳು ಮಂದಿ ಮಹಿಳಾ ಛಾಯಾಗ್ರಾಹಕಿಯರು ಸೇರಿದಂತೆ 52ಮಂದಿ ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದೊಡ್ಡಬಳ್ಳಾಪುರ ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ಮಂಜುನಾಥ್ ಸ್ಟುಡಿಯೋ ಮಾಲೀಕರಾದ ಜಿ.ರಾಜು ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶ್ನಿಸ್ತಿ ಸ್ವೀಕರಿಸಿದ ರಾಜು ರವರು ಮಾದ್ಯಮ ದೊಂದಿಗೆ ಮಾತನಾಡುತ್ತಾ ಛಾಯಾಚಿತ್ರ ಕಲೆಯನ್ನು ಕಲಿಸಿದ ಗುರುಗಳಿಗೆ ಹಾಗೂ ನನ್ನ ಗ್ರಾಹಕರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದೆಂದರು.
ಕಾರ್ಯಕ್ರಮದಲ್ಲಿ ಕಿರುತೆರೆ ನಟ ವಿಕ್ರಂ ಸೂರಿ, ಸಿನಿಮಾಟೋಗ್ರಾಫರ್ ಜಿಜಿ ಕೃಷ್ಣ, ನಿಕಾನ್ ಮುಖ್ಯಸ್ಥ ಸಜ್ಜನ್,ಕೆವಿಪಿಎ ಅಧ್ಯಕ್ಷ ಬೆಂಜಮಿನ್, ಪದಾಧಿಕಾರಿಗಳಾದ ಕೃಷ್ಣಪ್ಪ, ಜಗದೀಶ್ ಮತ್ತಿತರರಿದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…