ನಾಸಾದ ‘ಕ್ರ್ಯೂ–10’ ಮಿಷನ್ನ ನಾಲ್ವರು ಗಗನಯಾತ್ರಿಗಳು ಭಾನುವಾರ ಬೆಳಿಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಸುರಕ್ಷಿತವಾಗಿ ತಲುಪಿದ್ದಾರೆ.
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿಯನ್ನು ಸುಗಮಗೊಳಿಸಿದ್ದಾರೆ.
ಸರಿಸುಮಾರು 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ‘ಕ್ರ್ಯೂ–9’ ಮಿಷನ್ನ ಸಿಬ್ಬಂದಿಯನ್ನು(ಸುನಿತಾ ಮತ್ತು ಬುಚ್) ಕರೆತರಲು ಕ್ರ್ಯೂ–10 ಮಿಷನ್ಅನ್ನು ನಾಸಾ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿತ್ತು.
ಸ್ಪೇಸ್ಎಕ್ಸ್ನ ಕ್ರ್ಯೂ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾದ ಆ್ಯನ್ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್, ಜಪಾನ್ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಐಎಸ್ಎಸ್ಗೆ ತೆರಳಿದ್ದರು.
ಗಗನನೌಕೆಯು ಮರಳುವಾಗ ಸುನಿತಾ ಮತ್ತು ಬುಚ್ ಅವರ ಜೊತೆಗೆ ಐಎಸ್ಎಸ್ನಲ್ಲಿರುವ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೊರ್ಬನೊವ್ ಅವರನ್ನೂ ಕರೆತರಲಿದೆ. ಮಾರ್ಚ್ 19ರಂದು ‘ಕ್ರ್ಯೂ–9’ ಮಿಷನ್ನ ಸಿಬ್ಬಂದಿ ಭೂಮಿಗೆ ಬರುವ ಸಾಧ್ಯತೆಯಿದೆ.
ಸುನಿತಾ ಹಾಗೂ ವಿಲ್ಮೋರ್ ಅವರು ಕಳೆದ ವರ್ಷ ಜೂನ್ 5ರಂದು, ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಗಗನನೌಕೆಯಲ್ಲಿ ಐಎಸ್ಎಸ್ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…
ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…