ನಾಸಾದ ‘ಕ್ರ್ಯೂ–10’ ಮಿಷನ್ನ ನಾಲ್ವರು ಗಗನಯಾತ್ರಿಗಳು ಭಾನುವಾರ ಬೆಳಿಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಸುರಕ್ಷಿತವಾಗಿ ತಲುಪಿದ್ದಾರೆ.
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿಯನ್ನು ಸುಗಮಗೊಳಿಸಿದ್ದಾರೆ.
ಸರಿಸುಮಾರು 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ‘ಕ್ರ್ಯೂ–9’ ಮಿಷನ್ನ ಸಿಬ್ಬಂದಿಯನ್ನು(ಸುನಿತಾ ಮತ್ತು ಬುಚ್) ಕರೆತರಲು ಕ್ರ್ಯೂ–10 ಮಿಷನ್ಅನ್ನು ನಾಸಾ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿತ್ತು.
ಸ್ಪೇಸ್ಎಕ್ಸ್ನ ಕ್ರ್ಯೂ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾದ ಆ್ಯನ್ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್, ಜಪಾನ್ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಐಎಸ್ಎಸ್ಗೆ ತೆರಳಿದ್ದರು.
ಗಗನನೌಕೆಯು ಮರಳುವಾಗ ಸುನಿತಾ ಮತ್ತು ಬುಚ್ ಅವರ ಜೊತೆಗೆ ಐಎಸ್ಎಸ್ನಲ್ಲಿರುವ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೊರ್ಬನೊವ್ ಅವರನ್ನೂ ಕರೆತರಲಿದೆ. ಮಾರ್ಚ್ 19ರಂದು ‘ಕ್ರ್ಯೂ–9’ ಮಿಷನ್ನ ಸಿಬ್ಬಂದಿ ಭೂಮಿಗೆ ಬರುವ ಸಾಧ್ಯತೆಯಿದೆ.
ಸುನಿತಾ ಹಾಗೂ ವಿಲ್ಮೋರ್ ಅವರು ಕಳೆದ ವರ್ಷ ಜೂನ್ 5ರಂದು, ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಗಗನನೌಕೆಯಲ್ಲಿ ಐಎಸ್ಎಸ್ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.
ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…