Categories: ವಿಜ್ಞಾನ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಯಶಸ್ವಿಯಾಗಿ ತಲುಪಿದ ಗಗನಯಾತ್ರಿಗಳು: ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿ ಸುಗಮ

 

ನಾಸಾದ ‘ಕ್ರ್ಯೂ–10’ ಮಿಷನ್‌ನ ನಾಲ್ವರು ಗಗನಯಾತ್ರಿಗಳು ಭಾನುವಾರ ಬೆಳಿಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಸುರಕ್ಷಿತವಾಗಿ ತಲುಪಿದ್ದಾರೆ.

ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿಯನ್ನು ಸುಗಮಗೊಳಿಸಿದ್ದಾರೆ.

ಸರಿಸುಮಾರು 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ‘ಕ್ರ್ಯೂ–9’ ಮಿಷನ್‌ನ ಸಿಬ್ಬಂದಿಯನ್ನು(ಸುನಿತಾ ಮತ್ತು ಬುಚ್‌) ಕರೆತರಲು ಕ್ರ್ಯೂ–10 ಮಿಷನ್‌ಅನ್ನು ನಾಸಾ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿತ್ತು.

ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಐಎಸ್‌ಎಸ್‌ಗೆ ತೆರಳಿದ್ದರು.

ಗಗನನೌಕೆಯು ಮರಳುವಾಗ ಸುನಿತಾ ಮತ್ತು ಬುಚ್‌ ಅವರ ಜೊತೆಗೆ ಐಎಸ್‌ಎಸ್‌ನಲ್ಲಿರುವ ನಿಕ್‌ ಹೇಗ್‌ ಮತ್ತು ಅಲೆಕ್ಸಾಂಡರ್‌ ಗೊರ್ಬನೊವ್ ಅವರನ್ನೂ ಕರೆತರಲಿದೆ. ಮಾರ್ಚ್‌ 19ರಂದು ‘ಕ್ರ್ಯೂ–9’ ಮಿಷನ್‌ನ ಸಿಬ್ಬಂದಿ ಭೂಮಿಗೆ ಬರುವ ಸಾಧ್ಯತೆಯಿದೆ.

ಸುನಿತಾ ಹಾಗೂ ವಿಲ್ಮೋರ್‌ ಅವರು ಕಳೆದ ವರ್ಷ ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲಕ್ಷ್ಮಿಪತಿ ಜಿ ಅಭಿನಂದನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ…

5 hours ago

MLC Election: ಮೊದಲ ಪ್ರಾಶಸ್ತ್ಯ ಮತ

ಕರ್ನಾಟಕ ವಿಧಾನ ಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಚುನಾವಣೆ ಫಲಿತಾಂಶ (ಮೊದಲ ಪ್ರಾಶಸ್ತ್ಯ ಮತ) INC ------- 1.…

6 hours ago

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

17 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

19 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

1 day ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

1 day ago