Categories: ವಿಜ್ಞಾನ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಯಶಸ್ವಿಯಾಗಿ ತಲುಪಿದ ಗಗನಯಾತ್ರಿಗಳು: ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿ ಸುಗಮ

 

ನಾಸಾದ ‘ಕ್ರ್ಯೂ–10’ ಮಿಷನ್‌ನ ನಾಲ್ವರು ಗಗನಯಾತ್ರಿಗಳು ಭಾನುವಾರ ಬೆಳಿಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಸುರಕ್ಷಿತವಾಗಿ ತಲುಪಿದ್ದಾರೆ.

ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿಯನ್ನು ಸುಗಮಗೊಳಿಸಿದ್ದಾರೆ.

ಸರಿಸುಮಾರು 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ‘ಕ್ರ್ಯೂ–9’ ಮಿಷನ್‌ನ ಸಿಬ್ಬಂದಿಯನ್ನು(ಸುನಿತಾ ಮತ್ತು ಬುಚ್‌) ಕರೆತರಲು ಕ್ರ್ಯೂ–10 ಮಿಷನ್‌ಅನ್ನು ನಾಸಾ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿತ್ತು.

ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಐಎಸ್‌ಎಸ್‌ಗೆ ತೆರಳಿದ್ದರು.

ಗಗನನೌಕೆಯು ಮರಳುವಾಗ ಸುನಿತಾ ಮತ್ತು ಬುಚ್‌ ಅವರ ಜೊತೆಗೆ ಐಎಸ್‌ಎಸ್‌ನಲ್ಲಿರುವ ನಿಕ್‌ ಹೇಗ್‌ ಮತ್ತು ಅಲೆಕ್ಸಾಂಡರ್‌ ಗೊರ್ಬನೊವ್ ಅವರನ್ನೂ ಕರೆತರಲಿದೆ. ಮಾರ್ಚ್‌ 19ರಂದು ‘ಕ್ರ್ಯೂ–9’ ಮಿಷನ್‌ನ ಸಿಬ್ಬಂದಿ ಭೂಮಿಗೆ ಬರುವ ಸಾಧ್ಯತೆಯಿದೆ.

ಸುನಿತಾ ಹಾಗೂ ವಿಲ್ಮೋರ್‌ ಅವರು ಕಳೆದ ವರ್ಷ ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

6 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

6 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

7 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

8 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

9 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

13 hours ago