ನಾಸಾದ ‘ಕ್ರ್ಯೂ–10’ ಮಿಷನ್ನ ನಾಲ್ವರು ಗಗನಯಾತ್ರಿಗಳು ಭಾನುವಾರ ಬೆಳಿಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಸುರಕ್ಷಿತವಾಗಿ ತಲುಪಿದ್ದಾರೆ.
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿಯನ್ನು ಸುಗಮಗೊಳಿಸಿದ್ದಾರೆ.
ಸರಿಸುಮಾರು 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ‘ಕ್ರ್ಯೂ–9’ ಮಿಷನ್ನ ಸಿಬ್ಬಂದಿಯನ್ನು(ಸುನಿತಾ ಮತ್ತು ಬುಚ್) ಕರೆತರಲು ಕ್ರ್ಯೂ–10 ಮಿಷನ್ಅನ್ನು ನಾಸಾ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿತ್ತು.
ಸ್ಪೇಸ್ಎಕ್ಸ್ನ ಕ್ರ್ಯೂ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾದ ಆ್ಯನ್ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್, ಜಪಾನ್ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಐಎಸ್ಎಸ್ಗೆ ತೆರಳಿದ್ದರು.
ಗಗನನೌಕೆಯು ಮರಳುವಾಗ ಸುನಿತಾ ಮತ್ತು ಬುಚ್ ಅವರ ಜೊತೆಗೆ ಐಎಸ್ಎಸ್ನಲ್ಲಿರುವ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೊರ್ಬನೊವ್ ಅವರನ್ನೂ ಕರೆತರಲಿದೆ. ಮಾರ್ಚ್ 19ರಂದು ‘ಕ್ರ್ಯೂ–9’ ಮಿಷನ್ನ ಸಿಬ್ಬಂದಿ ಭೂಮಿಗೆ ಬರುವ ಸಾಧ್ಯತೆಯಿದೆ.
ಸುನಿತಾ ಹಾಗೂ ವಿಲ್ಮೋರ್ ಅವರು ಕಳೆದ ವರ್ಷ ಜೂನ್ 5ರಂದು, ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಗಗನನೌಕೆಯಲ್ಲಿ ಐಎಸ್ಎಸ್ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…