ನಾಸಾದ ‘ಕ್ರ್ಯೂ–10’ ಮಿಷನ್ನ ನಾಲ್ವರು ಗಗನಯಾತ್ರಿಗಳು ಭಾನುವಾರ ಬೆಳಿಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಸುರಕ್ಷಿತವಾಗಿ ತಲುಪಿದ್ದಾರೆ.
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿಯನ್ನು ಸುಗಮಗೊಳಿಸಿದ್ದಾರೆ.
ಸರಿಸುಮಾರು 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ‘ಕ್ರ್ಯೂ–9’ ಮಿಷನ್ನ ಸಿಬ್ಬಂದಿಯನ್ನು(ಸುನಿತಾ ಮತ್ತು ಬುಚ್) ಕರೆತರಲು ಕ್ರ್ಯೂ–10 ಮಿಷನ್ಅನ್ನು ನಾಸಾ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿತ್ತು.
ಸ್ಪೇಸ್ಎಕ್ಸ್ನ ಕ್ರ್ಯೂ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾದ ಆ್ಯನ್ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್, ಜಪಾನ್ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಐಎಸ್ಎಸ್ಗೆ ತೆರಳಿದ್ದರು.
ಗಗನನೌಕೆಯು ಮರಳುವಾಗ ಸುನಿತಾ ಮತ್ತು ಬುಚ್ ಅವರ ಜೊತೆಗೆ ಐಎಸ್ಎಸ್ನಲ್ಲಿರುವ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೊರ್ಬನೊವ್ ಅವರನ್ನೂ ಕರೆತರಲಿದೆ. ಮಾರ್ಚ್ 19ರಂದು ‘ಕ್ರ್ಯೂ–9’ ಮಿಷನ್ನ ಸಿಬ್ಬಂದಿ ಭೂಮಿಗೆ ಬರುವ ಸಾಧ್ಯತೆಯಿದೆ.
ಸುನಿತಾ ಹಾಗೂ ವಿಲ್ಮೋರ್ ಅವರು ಕಳೆದ ವರ್ಷ ಜೂನ್ 5ರಂದು, ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಗಗನನೌಕೆಯಲ್ಲಿ ಐಎಸ್ಎಸ್ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…