ಆಧುನಿಕ ಯುಗದ ಮಕ್ಕಳು ಮೊಬೈಲ್, ಟೆಲಿವಿಷನ್, ಪ್ರೀತಿ-ಪ್ರೇಮ, ಮಾದಕ ವಸ್ತುಗಳ ಸೇವನೆ ಸೇರಿದಂತೆ ಕೆಟ್ಟಚಟಗಳಿಗೆ ಒಳಗಾಗಿ ಮಾನಸಿಕವಾಗಿ ಖಿನ್ನತೆಯಿಂದ ಬಳಲಿ ಕೊನೆಗೆ ಅನಾರೋಗ್ಯ ಪೀಡಿತರಾಗಿಯೋ ಅಥವಾ ಆತ್ಮಹತ್ಯೆ ಮಾಡಿಕೊಂಡೋ ತಮ್ಮ ಉಜ್ವಲ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿರುವ ಸಾಕಷ್ಟು ಉದಾಹರಣೆಗಳು ಕಂಡುಬಂದಿವೆ.
ಕೆಲವು ಮಕ್ಕಳು ಶಾಲಾ-ಕಾಲೇಜಿಗೆ ಹೋದ ಪುಟ್ಟ, ಬಂದ ಪುಟ್ಟ ಎನ್ನುವ ಹಾಗೇ ಇರುತ್ತಾರೆ, ಪೋಷಕರು ಮಕ್ಕಳಿಂದ ಆಶಿಸುವುದು ಕೇವಲ ಮಾರ್ಕ್ಸ್ ಅಷ್ಟೇ. ಈ ಹಿನ್ನೆಲೆ ವಿದ್ಯಾರ್ಥಿಗಳು ಪೋಷಕರ ಆಸೆ ನೆರವೇರಿಸಲು ಕೇವಲ ಬುಕೀಶ್ ಆಗಿ ಮಾರ್ಕ್ಸ್ ಪಡೆಯುವಲ್ಲಿ ಚಿಂತನೆ ನಡೆಸುತ್ತಾರೆ.
2019 ರಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆದ 9 ನೇ ಏಷ್ಯನ್ ಯೋಗ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ, ಸಾಂಪ್ರದಾಯಿಕ ಯೋಗದಲ್ಲಿ ಬೆಳ್ಳಿ ಪದಕ ಮತ್ತು ಲಯಬದ್ಧ ಯೋಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ಪ್ರಶಸ್ತಿ ಹಾಗೂ ಹತ್ತು ಸಾವಿರ ನಗದು ಬಹುಮಾನ. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ, ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರಿನ ಏಕತಾ ಫೌಂಡೇಶನ್ನಿಂದ ಏಕತಾ ರಾಜ್ಯ ಸುಯೋಗಿ ಪ್ರಶಸ್ತಿ- 2022 ಅನ್ನು ಸ್ವೀಕರಿಸಿದ್ದಾರೆ.
ಯೋಗಪಟು ಎಂ.ಆರ್. ಜಾನ್ಹವಿ ರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿಯ ಸಾಧನೆ ಮಾಡಿದ ಹಿನ್ನೆಲೆ ದೊಡ್ಡಬಳ್ಳಾಪುರ ಜನತೆ ಅಭಿನಂದನೆಗಳನ್ನ ಸಲ್ಲಿಸಿದ್ದರು.
ನಮ್ಮ ಮಗಳ ಈ ಎಲ್ಲಾ ಸಾಧನೆಗಳಿಂದ ನಮಗೆ ಖುಷಿ ತಂದಿದೆ. ಮನೆಯಲ್ಲಿ ಹಾಗೂ ಯೋಗ ತರಬೇತಿ ಕೇಂದ್ರದಲ್ಲಿ ಪ್ರತಿದಿನ ಕಠಿಣ ಅಭ್ಯಾಸ ಮಾಡುತ್ತಿರುತ್ತಾಳೆ. ಅದೇರೀತಿ ಓದುವ ಕಡೆಗೂ ಗಮನ ಹರಿಸುತ್ತಾಳೆ. ನಮ್ಮ ಮಗಳು ನಮ್ಮ ಹೆಮ್ಮೆ ಎಂದು ಜಾನ್ಹವಿ ಸಾಧನೆಗೆ ಪೋಷಕರು ಹೆಮ್ಮೆಯ ಮಾತುಗಳನ್ನಾಡಿದರು.
ನಾನು ಓದುವ ಜೊತೆಗೆ ಯೋಗಾಭ್ಯಾಸ ಮಾಡುತ್ತೇನೆ. ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ವಿವಿಧ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದೇನೆ. ಇದಕ್ಕೆಲ್ಲ ನನ್ನ ಯೋಗ ಟೀಚರ್ ಹಾಗೂ ನನ್ನ ತಂದೆ-ತಾಯಿ. ಯೋಗದಲ್ಲಿ ಇನ್ನಷ್ಟು ಸಾಧನೆ ಮಾಡುವ ಹಂಬಲ ನನಗಿದೆ. ಈ ನಿಟ್ಟಿನಲ್ಲಿ ಅಭ್ಯಾಸ ಮಾಡುವೆ. ಎಲ್ಲರೂ ಯೋಗ ಮಾಡಿ ಆರೋಗ್ಯದಿಂದಿರಿ ಎಂದು ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…