ಆಧುನಿಕ ಯುಗದ ಮಕ್ಕಳು ಮೊಬೈಲ್, ಟೆಲಿವಿಷನ್, ಪ್ರೀತಿ-ಪ್ರೇಮ, ಮಾದಕ ವಸ್ತುಗಳ ಸೇವನೆ ಸೇರಿದಂತೆ ಕೆಟ್ಟಚಟಗಳಿಗೆ ಒಳಗಾಗಿ ಮಾನಸಿಕವಾಗಿ ಖಿನ್ನತೆಯಿಂದ ಬಳಲಿ ಕೊನೆಗೆ ಅನಾರೋಗ್ಯ ಪೀಡಿತರಾಗಿಯೋ ಅಥವಾ ಆತ್ಮಹತ್ಯೆ ಮಾಡಿಕೊಂಡೋ ತಮ್ಮ ಉಜ್ವಲ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿರುವ ಸಾಕಷ್ಟು ಉದಾಹರಣೆಗಳು ಕಂಡುಬಂದಿವೆ.
ಕೆಲವು ಮಕ್ಕಳು ಶಾಲಾ-ಕಾಲೇಜಿಗೆ ಹೋದ ಪುಟ್ಟ, ಬಂದ ಪುಟ್ಟ ಎನ್ನುವ ಹಾಗೇ ಇರುತ್ತಾರೆ, ಪೋಷಕರು ಮಕ್ಕಳಿಂದ ಆಶಿಸುವುದು ಕೇವಲ ಮಾರ್ಕ್ಸ್ ಅಷ್ಟೇ. ಈ ಹಿನ್ನೆಲೆ ವಿದ್ಯಾರ್ಥಿಗಳು ಪೋಷಕರ ಆಸೆ ನೆರವೇರಿಸಲು ಕೇವಲ ಬುಕೀಶ್ ಆಗಿ ಮಾರ್ಕ್ಸ್ ಪಡೆಯುವಲ್ಲಿ ಚಿಂತನೆ ನಡೆಸುತ್ತಾರೆ.
2019 ರಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆದ 9 ನೇ ಏಷ್ಯನ್ ಯೋಗ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ, ಸಾಂಪ್ರದಾಯಿಕ ಯೋಗದಲ್ಲಿ ಬೆಳ್ಳಿ ಪದಕ ಮತ್ತು ಲಯಬದ್ಧ ಯೋಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ಪ್ರಶಸ್ತಿ ಹಾಗೂ ಹತ್ತು ಸಾವಿರ ನಗದು ಬಹುಮಾನ. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ, ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರಿನ ಏಕತಾ ಫೌಂಡೇಶನ್ನಿಂದ ಏಕತಾ ರಾಜ್ಯ ಸುಯೋಗಿ ಪ್ರಶಸ್ತಿ- 2022 ಅನ್ನು ಸ್ವೀಕರಿಸಿದ್ದಾರೆ.
ಯೋಗಪಟು ಎಂ.ಆರ್. ಜಾನ್ಹವಿ ರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿಯ ಸಾಧನೆ ಮಾಡಿದ ಹಿನ್ನೆಲೆ ದೊಡ್ಡಬಳ್ಳಾಪುರ ಜನತೆ ಅಭಿನಂದನೆಗಳನ್ನ ಸಲ್ಲಿಸಿದ್ದರು.
ನಮ್ಮ ಮಗಳ ಈ ಎಲ್ಲಾ ಸಾಧನೆಗಳಿಂದ ನಮಗೆ ಖುಷಿ ತಂದಿದೆ. ಮನೆಯಲ್ಲಿ ಹಾಗೂ ಯೋಗ ತರಬೇತಿ ಕೇಂದ್ರದಲ್ಲಿ ಪ್ರತಿದಿನ ಕಠಿಣ ಅಭ್ಯಾಸ ಮಾಡುತ್ತಿರುತ್ತಾಳೆ. ಅದೇರೀತಿ ಓದುವ ಕಡೆಗೂ ಗಮನ ಹರಿಸುತ್ತಾಳೆ. ನಮ್ಮ ಮಗಳು ನಮ್ಮ ಹೆಮ್ಮೆ ಎಂದು ಜಾನ್ಹವಿ ಸಾಧನೆಗೆ ಪೋಷಕರು ಹೆಮ್ಮೆಯ ಮಾತುಗಳನ್ನಾಡಿದರು.
ನಾನು ಓದುವ ಜೊತೆಗೆ ಯೋಗಾಭ್ಯಾಸ ಮಾಡುತ್ತೇನೆ. ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ವಿವಿಧ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದೇನೆ. ಇದಕ್ಕೆಲ್ಲ ನನ್ನ ಯೋಗ ಟೀಚರ್ ಹಾಗೂ ನನ್ನ ತಂದೆ-ತಾಯಿ. ಯೋಗದಲ್ಲಿ ಇನ್ನಷ್ಟು ಸಾಧನೆ ಮಾಡುವ ಹಂಬಲ ನನಗಿದೆ. ಈ ನಿಟ್ಟಿನಲ್ಲಿ ಅಭ್ಯಾಸ ಮಾಡುವೆ. ಎಲ್ಲರೂ ಯೋಗ ಮಾಡಿ ಆರೋಗ್ಯದಿಂದಿರಿ ಎಂದು ಹೇಳಿದರು.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…