Categories: ಲೇಖನ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ರೈತ ಮಕ್ಕಳು…

ಇನ್ನಷ್ಟು ಬಹುದೊಡ್ಡ ವಿಮಾನ ನಿಲ್ದಾಣಗಳ ನಿರ್ಮಾಣದ ಯೋಜನೆಗಳ ಹೊಸ್ತಿಲಿನಲ್ಲಿ……….

ಭೂಮಿಯ ಮೇಲೆ ನಡೆಯುವುದು, ನೀರಿನ ಮೇಲೆ ತೇಲುವುದು, ಆಕಾಶದಲ್ಲಿ ಗಾಳಿಯಲ್ಲಿ ಹಾರಾಡುವುದು ಮನುಷ್ಯನ ಕುತೂಹಲದ ಪ್ರಯಾಣದ ಕನಸುಗಳಲ್ಲಿ ಮುಖ್ಯವಾದವು.

ರಸ್ತೆ ಹೊರತುಪಡಿಸಿ ನೀರು ಮತ್ತು ಗಾಳಿಯಲ್ಲಿ ಸಂಚರಿಸುವುದು ತುಂಬಾ ದುಬಾರಿಯಾದುದು. ಆಧುನಿಕ ಕಾಲದಲ್ಲಿ ವಿಮಾನ ಸಂಚಾರ ತುಂಬಾ ಸುಲಭವಾಗಿದೆ. ಆದರೆ ಅದು ಶ್ರೀಮಂತರ ಪ್ರಯಾಣ ವ್ಯವಸ್ಥೆ ಎಂಬುದು ಮಾತ್ರ ಸತ್ಯ. ಏಕೆಂದರೆ ಭಾರತದಲ್ಲಿ ಕೇವಲ ‌3/5% ಶೇಕಡಾ ಜನರು ಮಾತ್ರ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ. ಆದರೆ ಅದಕ್ಕಾಗಿ ವ್ಯಯಿಸುವ ಸಮಯ, ಹಣ, ಭೂಮಿ ಮುಂತಾದ ಸಂಪನ್ಮೂಲಗಳು ಮಾತ್ರ ಅತಿಹೆಚ್ಚು. ಅಂದರೆ ಕೇವಲ ಕೆಲವೇ ಜನರ ಹಿತಕ್ಕಾಗಿ ತುಂಬಾ ಶ್ರಮ ಪಡಬೇಕಾಗುತ್ತದೆ….

ಇಲ್ಲಿ ಮುಖ್ಯವಾಗಿ ರೈತ ಮಕ್ಕಳು ನೆನಪಾಗಲು ಕಾರಣ…….

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದ್ದ ಜಾಗ ಕೆಲವು ವರ್ಷಗಳ ಹಿಂದೆ ರೈತರ ಒಡೆತನದಲ್ಲಿತ್ತು. ಒಂದಷ್ಟು ಕೃಷಿ ಭೂಮಿ ಮತ್ತೊಂದಷ್ಟು ಕುರುಚಲು ಗಿಡಗಳ ಪಾಳು ಭೂಮಿ.

ವಿಮಾನ ನಿಲ್ದಾಣ ಮಾಡುವ ನಿರ್ಧಾರದ ನಂತರ ಆ ಜಾಗವನ್ನು ರೈತರಿಂದ ವಶಪಡಿಸಿಕೊಂಡು ಅದಕ್ಕೆ ಉತ್ತಮ ಪರಿಹಾರದ ಮೊತ್ತವನ್ನು ಅವರಿಗೆ ಕೊಡಲಾಯಿತು ಮತ್ತು ಅಲ್ಲಿನ ಸುತ್ತಮುತ್ತಲಿನ ಜಮೀನಿನ ಬೆಲೆ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾಗಿ ಸಾಕಷ್ಟು ಹಣವಂತರು ಅದನ್ನು ರೈತರಿಂದ ಖರೀದಿಸಿದರು. ರಿಯಲ್ ಎಸ್ಟೇಟ್ ಒಂದು ದೊಡ್ಡ ಉದ್ಯಮ ಮತ್ತು ದಂಧೆಯಾಯಿತು……

ಸುಮಾರು ‌15/20 ವರ್ಷಗಳ ನಂತರ……….

ಯಾವ ರೈತರ ಜಮೀನನ್ನು ಸರ್ಕಾರ ವಶಪಡಿಸಿಕೊಂಡು ಹಣ ನೀಡಿತೋ, ಯಾವ ರೈತರು ಹಣದ ಆಸೆಗಾಗಿ ಅಥವಾ ಬದುಕಿನ ಅನಿವಾರ್ಯತೆಗಾಗಿ ತಮ್ಮ ಹೊಲ ಗದ್ದೆಗಳನ್ನು ಮಾರಿಕೊಂಡರೋ ಅವರಲ್ಲಿ ಬಹುಶಃ ಶೇಕಡಾ 70% ಕ್ಕೂ ಹೆಚ್ಚು ಜನರ ಬಳಿ ಜಮೀನೂ ಇಲ್ಲ ಅಥವಾ ಆಗ ಗಳಿಸಿದ ಹಣವೂ ಇಲ್ಲ. ಅವರಲ್ಲಿ ಬಹುತೇಕರು ಅದೇ ವಿಮಾನ ನಿಲ್ದಾಣ ಮತ್ತು ಅಲ್ಲಿನ ಸುತ್ತಮುತ್ತಲಿನ ವ್ಯಾಪಾರ ಕೇಂದ್ರಗಳಲ್ಲಿ ಕೆಲಸಗಾರರಾಗಿ ದುಡಿಯುತ್ತಿದ್ದಾರೆ. ಕೆಲವರು ಮಾತ್ರ ಬಂದ ಹಣವನ್ನು ಸದುಪಯೋಗ ಪಡಿಸಿಕೊಂಡು ಮೊದಲಿಗಿಂತ ಉತ್ತಮ ಗುಣಮಟ್ಟ ಜೀವನ ನಡೆಸುತ್ತಿದ್ದಾರೆ….

ನಿಜವಾದ ಚಿಂತನೆ ಮತ್ತು ಅಧ್ಯಯನದ ಅವಶ್ಯಕತೆ ಇರುವುದು ಇಲ್ಲಿಯೇ……

ಇದು ನಾಗರಿಕ ಸಮಾಜದ ಸಹಜ ಗುಣ. ಸಾಮರ್ಥ್ಯ ಇರುವವರು, ಬುದ್ದಿವಂತರು, ಎಲ್ಲಾ ರೀತಿಯ ಶ್ರಮಜೀವಿಗಳು ಪರಿಸ್ಥಿತಿಯನ್ನು ಬೇಗ ಅರ್ಥಮಾಡಿಕೊಂಡು ದೂರದೃಷ್ಟಿಯಿಂದ ಅದರ ಲಾಭ ಪಡೆದು ಶ್ರೀಮಂತರಾಗಿ ಬದುಕುತ್ತಾರೆ, ಇದು ಸರಿ ಎನ್ನುವ ಬಲಪಂಥೀಯ ವಾದ…..

ಅಥವಾ….

ಸಾಮಾಜಿಕ ಅಸಮಾನತೆ, ಸಂಕೀರ್ಣ ಜಾತಿ ವ್ಯವಸ್ಥೆಯ ಅಮಾನವೀಯತೆ, ದುರ್ಬಲರ‌‌ ಶೋಷಣೆ, ಹಣ ಅಧಿಕಾರ ಶಕ್ತಿ ಇರುವವರು ತಮ್ಮದೇ ಸಮುದಾಯಗಳನ್ನು ಧರ್ಮ ಅಥವಾ ಕಾನೂನು ಅಥವಾ ಸಂಪ್ರದಾಯದ ಹೆಸರಿನಲ್ಲಿ ವಂಚಿಸಿ ತಮ್ಮ ಸುಖಕ್ಕಾಗಿ ಈ ಜನರ ದೌರ್ಬಲ್ಯವನ್ನು ದುರುಪಯೋಗ ಪಡಿಸಿಕೊಳ್ಳುವರು ಎನ್ನುವ ಎಡಪಂಥೀಯ ವಾದ…..

ಈ ಎಡ ಬಲ ವಾದಗಳ ಜೊತೆಗೆ ಅಂಬೇಡ್ಕರ್ ಬಸವಣ್ಣ ಗಾಂಧಿ ಲೋಹಿಯಾ ಮುಂತಾದವರ ಚಿಂತನೆಗಳು ಸಹ ಇಲ್ಲಿ ಒಂದಷ್ಟು ಪ್ರಸ್ತುತವಾಗುತ್ತದೆ.

ಹಾಗಾದರೆ ಅಭಿವೃದ್ಧಿಯ ಮಾನದಂಡ ಯಾವುದು ?….

ವಿಮಾನ ನಿಲ್ದಾಣಗಳ ಶ್ರೀಮಂತಿಕೆಯೇ ಅಥವಾ ರೈತ ಮಕ್ಕಳ ದುರ್ಗತಿಯೇ ?

ಹಣವೇ ಪ್ರಧಾನವಾದ ಸಮಾಜದಲ್ಲಿ ಇದರ ಬಗ್ಗೆ ಚಿಂತನೆಗೆ ಸಮಯವೂ ಸಿಗುತ್ತಿಲ್ಲ. ಕೆಲವರ ಬದುಕು ವಿಮಾನಗಳ ಹಾರಾಟದಂತೆ ವೇಗವಾಗಿ ಗಾಳಿಯಲ್ಲಿ ಹಾರಾಡುತ್ತಾ ಸಾಗುತ್ತಿದ್ದರೆ ಮತ್ತೆ ಕೆಲವರ ಬದುಕು ಜಟಕಾ ಬಂಡಿ………

ಎರಡರ ನಡುವೆ ಸಮನ್ವಯ ಸಾಧಿಸಬೇಕಾಗಿದ್ದ ಸರ್ಕಾರಗಳು ಕುರ್ಚಿಯ ಸುತ್ತ ಸುತ್ತುತ್ತಾ ತಮ್ಮ ಹಿತಾಸಕ್ತಿಗಳನ್ನು ಮಾತ್ರ ಕಾಯ್ದುಕೊಂಡಿವೆ……

ಇತ್ತೀಚೆಗೆ ಮತ್ತಷ್ಟು ವಿಮಾನ ನಿಲ್ದಾಣಗಳ ಸ್ಥಾಪನೆಗಾಗಿ ನಡೆಯುತ್ತಿರುವ ಪ್ರಯತ್ನಗಳ ಹಿನ್ನೆಲೆಯಲ್ಲಿ…….

ಈಗ ಯೋಚಿಸಬೇಕಾದ ಮತ್ತು ಕಾರ್ಯರೂಪಕ್ಕೆ ಇಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದು…..

ಅದಕ್ಕಾಗಿಯೇ ಮಾನವೀಯ ಮೌಲ್ಯಗಳ ಪುನರುತ್ಥಾನ ಇಂದು ಅತ್ಯಂತ ಅವಶ್ಯಕ. ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸೋಣ ಎಂದು ಆಶಿಸುತ್ತಾ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

7 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

10 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago