Categories: ಲೇಖನ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ರೈತ ಮಕ್ಕಳು…

ಇನ್ನಷ್ಟು ಬಹುದೊಡ್ಡ ವಿಮಾನ ನಿಲ್ದಾಣಗಳ ನಿರ್ಮಾಣದ ಯೋಜನೆಗಳ ಹೊಸ್ತಿಲಿನಲ್ಲಿ……….

ಭೂಮಿಯ ಮೇಲೆ ನಡೆಯುವುದು, ನೀರಿನ ಮೇಲೆ ತೇಲುವುದು, ಆಕಾಶದಲ್ಲಿ ಗಾಳಿಯಲ್ಲಿ ಹಾರಾಡುವುದು ಮನುಷ್ಯನ ಕುತೂಹಲದ ಪ್ರಯಾಣದ ಕನಸುಗಳಲ್ಲಿ ಮುಖ್ಯವಾದವು.

ರಸ್ತೆ ಹೊರತುಪಡಿಸಿ ನೀರು ಮತ್ತು ಗಾಳಿಯಲ್ಲಿ ಸಂಚರಿಸುವುದು ತುಂಬಾ ದುಬಾರಿಯಾದುದು. ಆಧುನಿಕ ಕಾಲದಲ್ಲಿ ವಿಮಾನ ಸಂಚಾರ ತುಂಬಾ ಸುಲಭವಾಗಿದೆ. ಆದರೆ ಅದು ಶ್ರೀಮಂತರ ಪ್ರಯಾಣ ವ್ಯವಸ್ಥೆ ಎಂಬುದು ಮಾತ್ರ ಸತ್ಯ. ಏಕೆಂದರೆ ಭಾರತದಲ್ಲಿ ಕೇವಲ ‌3/5% ಶೇಕಡಾ ಜನರು ಮಾತ್ರ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ. ಆದರೆ ಅದಕ್ಕಾಗಿ ವ್ಯಯಿಸುವ ಸಮಯ, ಹಣ, ಭೂಮಿ ಮುಂತಾದ ಸಂಪನ್ಮೂಲಗಳು ಮಾತ್ರ ಅತಿಹೆಚ್ಚು. ಅಂದರೆ ಕೇವಲ ಕೆಲವೇ ಜನರ ಹಿತಕ್ಕಾಗಿ ತುಂಬಾ ಶ್ರಮ ಪಡಬೇಕಾಗುತ್ತದೆ….

ಇಲ್ಲಿ ಮುಖ್ಯವಾಗಿ ರೈತ ಮಕ್ಕಳು ನೆನಪಾಗಲು ಕಾರಣ…….

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದ್ದ ಜಾಗ ಕೆಲವು ವರ್ಷಗಳ ಹಿಂದೆ ರೈತರ ಒಡೆತನದಲ್ಲಿತ್ತು. ಒಂದಷ್ಟು ಕೃಷಿ ಭೂಮಿ ಮತ್ತೊಂದಷ್ಟು ಕುರುಚಲು ಗಿಡಗಳ ಪಾಳು ಭೂಮಿ.

ವಿಮಾನ ನಿಲ್ದಾಣ ಮಾಡುವ ನಿರ್ಧಾರದ ನಂತರ ಆ ಜಾಗವನ್ನು ರೈತರಿಂದ ವಶಪಡಿಸಿಕೊಂಡು ಅದಕ್ಕೆ ಉತ್ತಮ ಪರಿಹಾರದ ಮೊತ್ತವನ್ನು ಅವರಿಗೆ ಕೊಡಲಾಯಿತು ಮತ್ತು ಅಲ್ಲಿನ ಸುತ್ತಮುತ್ತಲಿನ ಜಮೀನಿನ ಬೆಲೆ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾಗಿ ಸಾಕಷ್ಟು ಹಣವಂತರು ಅದನ್ನು ರೈತರಿಂದ ಖರೀದಿಸಿದರು. ರಿಯಲ್ ಎಸ್ಟೇಟ್ ಒಂದು ದೊಡ್ಡ ಉದ್ಯಮ ಮತ್ತು ದಂಧೆಯಾಯಿತು……

ಸುಮಾರು ‌15/20 ವರ್ಷಗಳ ನಂತರ……….

ಯಾವ ರೈತರ ಜಮೀನನ್ನು ಸರ್ಕಾರ ವಶಪಡಿಸಿಕೊಂಡು ಹಣ ನೀಡಿತೋ, ಯಾವ ರೈತರು ಹಣದ ಆಸೆಗಾಗಿ ಅಥವಾ ಬದುಕಿನ ಅನಿವಾರ್ಯತೆಗಾಗಿ ತಮ್ಮ ಹೊಲ ಗದ್ದೆಗಳನ್ನು ಮಾರಿಕೊಂಡರೋ ಅವರಲ್ಲಿ ಬಹುಶಃ ಶೇಕಡಾ 70% ಕ್ಕೂ ಹೆಚ್ಚು ಜನರ ಬಳಿ ಜಮೀನೂ ಇಲ್ಲ ಅಥವಾ ಆಗ ಗಳಿಸಿದ ಹಣವೂ ಇಲ್ಲ. ಅವರಲ್ಲಿ ಬಹುತೇಕರು ಅದೇ ವಿಮಾನ ನಿಲ್ದಾಣ ಮತ್ತು ಅಲ್ಲಿನ ಸುತ್ತಮುತ್ತಲಿನ ವ್ಯಾಪಾರ ಕೇಂದ್ರಗಳಲ್ಲಿ ಕೆಲಸಗಾರರಾಗಿ ದುಡಿಯುತ್ತಿದ್ದಾರೆ. ಕೆಲವರು ಮಾತ್ರ ಬಂದ ಹಣವನ್ನು ಸದುಪಯೋಗ ಪಡಿಸಿಕೊಂಡು ಮೊದಲಿಗಿಂತ ಉತ್ತಮ ಗುಣಮಟ್ಟ ಜೀವನ ನಡೆಸುತ್ತಿದ್ದಾರೆ….

ನಿಜವಾದ ಚಿಂತನೆ ಮತ್ತು ಅಧ್ಯಯನದ ಅವಶ್ಯಕತೆ ಇರುವುದು ಇಲ್ಲಿಯೇ……

ಇದು ನಾಗರಿಕ ಸಮಾಜದ ಸಹಜ ಗುಣ. ಸಾಮರ್ಥ್ಯ ಇರುವವರು, ಬುದ್ದಿವಂತರು, ಎಲ್ಲಾ ರೀತಿಯ ಶ್ರಮಜೀವಿಗಳು ಪರಿಸ್ಥಿತಿಯನ್ನು ಬೇಗ ಅರ್ಥಮಾಡಿಕೊಂಡು ದೂರದೃಷ್ಟಿಯಿಂದ ಅದರ ಲಾಭ ಪಡೆದು ಶ್ರೀಮಂತರಾಗಿ ಬದುಕುತ್ತಾರೆ, ಇದು ಸರಿ ಎನ್ನುವ ಬಲಪಂಥೀಯ ವಾದ…..

ಅಥವಾ….

ಸಾಮಾಜಿಕ ಅಸಮಾನತೆ, ಸಂಕೀರ್ಣ ಜಾತಿ ವ್ಯವಸ್ಥೆಯ ಅಮಾನವೀಯತೆ, ದುರ್ಬಲರ‌‌ ಶೋಷಣೆ, ಹಣ ಅಧಿಕಾರ ಶಕ್ತಿ ಇರುವವರು ತಮ್ಮದೇ ಸಮುದಾಯಗಳನ್ನು ಧರ್ಮ ಅಥವಾ ಕಾನೂನು ಅಥವಾ ಸಂಪ್ರದಾಯದ ಹೆಸರಿನಲ್ಲಿ ವಂಚಿಸಿ ತಮ್ಮ ಸುಖಕ್ಕಾಗಿ ಈ ಜನರ ದೌರ್ಬಲ್ಯವನ್ನು ದುರುಪಯೋಗ ಪಡಿಸಿಕೊಳ್ಳುವರು ಎನ್ನುವ ಎಡಪಂಥೀಯ ವಾದ…..

ಈ ಎಡ ಬಲ ವಾದಗಳ ಜೊತೆಗೆ ಅಂಬೇಡ್ಕರ್ ಬಸವಣ್ಣ ಗಾಂಧಿ ಲೋಹಿಯಾ ಮುಂತಾದವರ ಚಿಂತನೆಗಳು ಸಹ ಇಲ್ಲಿ ಒಂದಷ್ಟು ಪ್ರಸ್ತುತವಾಗುತ್ತದೆ.

ಹಾಗಾದರೆ ಅಭಿವೃದ್ಧಿಯ ಮಾನದಂಡ ಯಾವುದು ?….

ವಿಮಾನ ನಿಲ್ದಾಣಗಳ ಶ್ರೀಮಂತಿಕೆಯೇ ಅಥವಾ ರೈತ ಮಕ್ಕಳ ದುರ್ಗತಿಯೇ ?

ಹಣವೇ ಪ್ರಧಾನವಾದ ಸಮಾಜದಲ್ಲಿ ಇದರ ಬಗ್ಗೆ ಚಿಂತನೆಗೆ ಸಮಯವೂ ಸಿಗುತ್ತಿಲ್ಲ. ಕೆಲವರ ಬದುಕು ವಿಮಾನಗಳ ಹಾರಾಟದಂತೆ ವೇಗವಾಗಿ ಗಾಳಿಯಲ್ಲಿ ಹಾರಾಡುತ್ತಾ ಸಾಗುತ್ತಿದ್ದರೆ ಮತ್ತೆ ಕೆಲವರ ಬದುಕು ಜಟಕಾ ಬಂಡಿ………

ಎರಡರ ನಡುವೆ ಸಮನ್ವಯ ಸಾಧಿಸಬೇಕಾಗಿದ್ದ ಸರ್ಕಾರಗಳು ಕುರ್ಚಿಯ ಸುತ್ತ ಸುತ್ತುತ್ತಾ ತಮ್ಮ ಹಿತಾಸಕ್ತಿಗಳನ್ನು ಮಾತ್ರ ಕಾಯ್ದುಕೊಂಡಿವೆ……

ಇತ್ತೀಚೆಗೆ ಮತ್ತಷ್ಟು ವಿಮಾನ ನಿಲ್ದಾಣಗಳ ಸ್ಥಾಪನೆಗಾಗಿ ನಡೆಯುತ್ತಿರುವ ಪ್ರಯತ್ನಗಳ ಹಿನ್ನೆಲೆಯಲ್ಲಿ…….

ಈಗ ಯೋಚಿಸಬೇಕಾದ ಮತ್ತು ಕಾರ್ಯರೂಪಕ್ಕೆ ಇಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದು…..

ಅದಕ್ಕಾಗಿಯೇ ಮಾನವೀಯ ಮೌಲ್ಯಗಳ ಪುನರುತ್ಥಾನ ಇಂದು ಅತ್ಯಂತ ಅವಶ್ಯಕ. ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸೋಣ ಎಂದು ಆಶಿಸುತ್ತಾ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

2 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

11 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

21 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

23 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago