ಅಂತಿಮ ಮತದಾರರ ಪಟ್ಟಿ ಪ್ರಕಟ: 9.05 ಲಕ್ಷ ಮತದಾರರು: ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ರ ಸಂಬಂಧ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ನಾಲ್ಕು ತಾಲೂಕುಗಳ ಎಲ್ಲಾ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಈ ಕಛೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ.

ಪ್ರಸಕ್ತ 2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024 ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆಯವರೆಗೆ ಕಾಣುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗೆಳಲ್ಲಿ ಮಾತು ಚಲಾವಣೆಗೆ ಅವಕಾಶ ದೊರೆಯಲಿದೆ ಎಂದರು.

*ಜಿಲ್ಲೆಯಲ್ಲಿ 9.05 ಲಕ್ಷ ಮತದಾರರು*

ಜಿಲ್ಲೆಯಲ್ಲಿ ಈಗ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 9,05,724 ಮತದಾರರು ಇದ್ದಾರೆ. ಇದರಲ್ಲಿ 4,46,918 ಪುರುಷ ಮತದಾರರು ಮತ್ತು 4,58,659 ಮಹಿಳಾ ಮತದಾರರು ಹಾಗೂ 147 ಇತರೆ ಮತದಾರರು ಇದ್ದಾರೆ.

ಒಟ್ಟು ಮತದಾರರ ಪೈಕಿ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕರು, 13,431 ವಿಶೇಷ ಚೇತನ ಮತದಾರರು ಹಾಗೂ 121 ಸೇವಾ ಮತದಾರರು ಇದ್ದಾರೆ ಎಂದರು.

*ಮಹಿಳಾ ಮತದಾರರು ಹೆಚ್ಚು*

ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ. ದೊಡ್ಡಬಳ್ಳಾಪುರದಲ್ಲಿ ಒಟ್ಟು 2,21,297 ಮತದಾರರಿದ್ದು, ಅದರಲ್ಲಿ 1,12,171 ಮಹಿಳಾ ಮತದಾರರು ಹಾಗೂ 1,09,125 ಪುರುಷ ಮತದಾರರಿದ್ದಾರೆ. ಹೊಸಕೋಟೆಯಲ್ಲಿ ಒಟ್ಟು 2,40,998 ಮತದಾರರಿದ್ದು, ಅದರಲ್ಲಿ 1,21,543 ಮಹಿಳೆ ಹಾಗೂ 1,19,434 ಪುರುಷ ಮತದಾರರು ಇದ್ದಾರೆ. ದೇವನಹಳ್ಳಿಯಲ್ಲಿ ಒಟ್ಟು 2,18,343 ಮತದಾರರಿದ್ದು, 1,10,457 ಮಹಿಳಾ ಹಾಗೂ 1,07,869 ಪುರುಷ ಮತದಾರರಿದ್ದಾರೆ. ನೆಲಮಂಗಲದಲ್ಲಿ 2,25,086 ಮತದಾರರ ಪೈಕಿ 1,14,488 ಮಹಿಳೆ ಹಾಗೂ 1,10,490 ಪುರುಷ ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಸಾವಿರ ಪುರುಷರಿಗೆ 1027 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1028, ಹೊಸಕೋಟೆಯಲ್ಲಿ 1018, ದೇವನಹಳ್ಳಿ 1024 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1037 ಲಿಂಗಾನುಪಾತ ಕಂಡುಬಂದಿದೆ.

*1141 ಮತಗಟ್ಟೆಗಳು*

ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು1141 ಮತಗಟ್ಟೆಗಳಿವೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 293 ಮತಗಟ್ಟೆ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 294, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276, ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 278 ಮತಗಟ್ಟೆಗಳಿದೆ.

*13,431ವಿಶೇಷಚೇತನ ಮತದಾರರು*

ಹೊಸಕೋಟೆ 3646, ದೇವನಹಳ್ಳಿ 3767 ಹಾಗೂ ದೊಡ್ಡಬಳ್ಳಾಪುರ 3399 ಹಾಗೂ ನೆಲಮಂಗಲದಲ್ಲಿ 2619 ಸೇರಿದಂತೆ ಒಟ್ಟು 12,624 ಮಂದಿ ವಿಶೇಷಚೇತನ ಮತದಾರರಿದ್ದಾರೆ. ಜತೆಗೆ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕ ಮತದಾರಿದ್ದಾರೆ. ಇನ್ನು ಸೇವಾ ಮತದಾರರು 128 ಮಂದಿ ಇದ್ದಾರೆ ಎಂದು ಮಾಹಿತಿ ನೀಡಿದರು.

*14,817 ಯುವ ಮತದಾರರು*

ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಮತದಾರರ ನೋಂದಣಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಂತಿಮ ಮತದಾರರ ಪಟ್ಟಿಯಲ್ಲಿ 18 ರಿಂದ 19 ವರ್ಷದೊಳಗಿನ 14,817 ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4173, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3808, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3886, ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2950 ಯುವ ಮತದಾರರಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷ ನಿರಂತರವಾಗಿ ನಡೆಯುತ್ತಿರುತ್ತದೆ. 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಚುನಾವಣಾ ಪ್ರಕ್ರಿಯೆಯು ಆಡಳಿತ ಯಂತ್ರಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪಾತ್ರವು ಕೂಡ ಮುಖ್ಯವಾಗಿದ್ದು ಸಹಕಾರ ಹಾಗೂ ಸಹಭಾಗಿತ್ವ ಇರಲಿ ಎಂದು ರಾಜಕೀಯ ಪಕ್ಷಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ(ಪ್ರಬಾರ) ಹೇಮಾವತಿ ಜೆ, ಚುನಾವಣಾ ಶಿರಸ್ತೇದಾರ್ ಪ್ರಸಾದ್, ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

8 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

12 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

14 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

16 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago