ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಡಾ.ಬಿ.ಆರ್.ಅಂಬೇಡ್ಕರ್ ಭವನ ಲೋಕಾರ್ಪಣೆ- ಗ್ರಾಮಸ್ಥರ ಆಕ್ರೋಶ

ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ತೂಬಗೆರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಸರ್ಕಾರದಿಂದ ಅನುಮೋದನೆಗೊಂಡಿದ್ದು, ಸದ್ಯ ನಿರ್ಮಾಣ ಹಂತದಲ್ಲಿ ಭವನ‌ ಇದೆ.

ನಿರ್ಮಿತಿ ಕೇಂದ್ರ ಗುತ್ತೆಗೆ ಪಡೆದು ಭವನ ನಿರ್ಮಾಣ ಮಾಡಲಾಗುತ್ತಿದೆ. ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ, ಗ್ರಾಮಸ್ಥರ ಗಮನಕ್ಕೆ ತರದೇ ಏಕಾಏಕಿ ಭವನ ಉದ್ಘಾಟನೆ ಮಾಡಲಾಗಿದೆ.

ಕಟ್ಟಡದ ಕಾಮಗಾರಿ ಶೇ.75ರಷ್ಟು ಮಾತ್ರ ಪೂರ್ಣಗೊಂಡಿದ್ದು, ಇನ್ನೂ ಕಾಂಪೌಂಡ್ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸುಣ್ಣ ಬಣ್ಣ ಬಳಿಯುವುದು, ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಸೂಕ್ತ ರಸ್ತೆ ಕಾಮಗಾರಿ ಸೇರಿದಂತೆ ಇನ್ನಿತರೆ ಕೆಲಸ ಕಾರ್ಯಗಳು ಬಾಕಿ ಇರುವಾಗಲೇ ಕಟ್ಟಡ ಉದ್ಘಾಟನೆ ಮಾಡಿರುವುದು ಊರಿನ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನ ಕಟ್ಟಡಕ್ಕೆ ಅದರದೇ ಆದ ಮಹತ್ವ, ಘನತೆ- ಗೌರವ ಇರುತ್ತದೆ. ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಲೋಕಾರ್ಪಣೆ ಮಾಡಲಾಗಿದೆ ಎಂದು ಊರಿನ ಮುಖಂಡ ಉದಯ್ ಆರಾಧ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಕಾಮಗಾರಿ ಪರಿಶೀಲಿಸಿ ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಘನತೆ, ಗೌರವ ತಂದುಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago