ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಡಾ.ಬಿ.ಆರ್.ಅಂಬೇಡ್ಕರ್ ಭವನ ಲೋಕಾರ್ಪಣೆ- ಗ್ರಾಮಸ್ಥರ ಆಕ್ರೋಶ

ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ತೂಬಗೆರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಸರ್ಕಾರದಿಂದ ಅನುಮೋದನೆಗೊಂಡಿದ್ದು, ಸದ್ಯ ನಿರ್ಮಾಣ ಹಂತದಲ್ಲಿ ಭವನ‌ ಇದೆ.

ನಿರ್ಮಿತಿ ಕೇಂದ್ರ ಗುತ್ತೆಗೆ ಪಡೆದು ಭವನ ನಿರ್ಮಾಣ ಮಾಡಲಾಗುತ್ತಿದೆ. ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ, ಗ್ರಾಮಸ್ಥರ ಗಮನಕ್ಕೆ ತರದೇ ಏಕಾಏಕಿ ಭವನ ಉದ್ಘಾಟನೆ ಮಾಡಲಾಗಿದೆ.

ಕಟ್ಟಡದ ಕಾಮಗಾರಿ ಶೇ.75ರಷ್ಟು ಮಾತ್ರ ಪೂರ್ಣಗೊಂಡಿದ್ದು, ಇನ್ನೂ ಕಾಂಪೌಂಡ್ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸುಣ್ಣ ಬಣ್ಣ ಬಳಿಯುವುದು, ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಸೂಕ್ತ ರಸ್ತೆ ಕಾಮಗಾರಿ ಸೇರಿದಂತೆ ಇನ್ನಿತರೆ ಕೆಲಸ ಕಾರ್ಯಗಳು ಬಾಕಿ ಇರುವಾಗಲೇ ಕಟ್ಟಡ ಉದ್ಘಾಟನೆ ಮಾಡಿರುವುದು ಊರಿನ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನ ಕಟ್ಟಡಕ್ಕೆ ಅದರದೇ ಆದ ಮಹತ್ವ, ಘನತೆ- ಗೌರವ ಇರುತ್ತದೆ. ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಲೋಕಾರ್ಪಣೆ ಮಾಡಲಾಗಿದೆ ಎಂದು ಊರಿನ ಮುಖಂಡ ಉದಯ್ ಆರಾಧ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಕಾಮಗಾರಿ ಪರಿಶೀಲಿಸಿ ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಘನತೆ, ಗೌರವ ತಂದುಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

26 minutes ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

10 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

15 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

18 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago