ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಡಾ.ಬಿ.ಆರ್.ಅಂಬೇಡ್ಕರ್ ಭವನ ಲೋಕಾರ್ಪಣೆ- ಗ್ರಾಮಸ್ಥರ ಆಕ್ರೋಶ

ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ತೂಬಗೆರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಸರ್ಕಾರದಿಂದ ಅನುಮೋದನೆಗೊಂಡಿದ್ದು, ಸದ್ಯ ನಿರ್ಮಾಣ ಹಂತದಲ್ಲಿ ಭವನ‌ ಇದೆ.

ನಿರ್ಮಿತಿ ಕೇಂದ್ರ ಗುತ್ತೆಗೆ ಪಡೆದು ಭವನ ನಿರ್ಮಾಣ ಮಾಡಲಾಗುತ್ತಿದೆ. ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ, ಗ್ರಾಮಸ್ಥರ ಗಮನಕ್ಕೆ ತರದೇ ಏಕಾಏಕಿ ಭವನ ಉದ್ಘಾಟನೆ ಮಾಡಲಾಗಿದೆ.

ಕಟ್ಟಡದ ಕಾಮಗಾರಿ ಶೇ.75ರಷ್ಟು ಮಾತ್ರ ಪೂರ್ಣಗೊಂಡಿದ್ದು, ಇನ್ನೂ ಕಾಂಪೌಂಡ್ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸುಣ್ಣ ಬಣ್ಣ ಬಳಿಯುವುದು, ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಸೂಕ್ತ ರಸ್ತೆ ಕಾಮಗಾರಿ ಸೇರಿದಂತೆ ಇನ್ನಿತರೆ ಕೆಲಸ ಕಾರ್ಯಗಳು ಬಾಕಿ ಇರುವಾಗಲೇ ಕಟ್ಟಡ ಉದ್ಘಾಟನೆ ಮಾಡಿರುವುದು ಊರಿನ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನ ಕಟ್ಟಡಕ್ಕೆ ಅದರದೇ ಆದ ಮಹತ್ವ, ಘನತೆ- ಗೌರವ ಇರುತ್ತದೆ. ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಲೋಕಾರ್ಪಣೆ ಮಾಡಲಾಗಿದೆ ಎಂದು ಊರಿನ ಮುಖಂಡ ಉದಯ್ ಆರಾಧ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಕಾಮಗಾರಿ ಪರಿಶೀಲಿಸಿ ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಘನತೆ, ಗೌರವ ತಂದುಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

4 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago