ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ ಸಂತಸ ಎದ್ದು ಕಾಣುವಂತಾಗಿದೆ. ದೊಡ್ಡಬಳ್ಳಾಪುರದಿಂದ ತೂಬಗೆರೆಗೆ ಹೋಗುವ ಎಲ್ಲಾ ಬಸ್ ಗಳು ಹಾಡೋನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದವು. ಲಕ್ಷ್ಮೀದೇವಿಪುರ ಗ್ರಾಮದ ಜನತೆ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬಸ್ ಹಿಡಿಯಬೇಕಿತ್ತು. ಈ ಹಿನ್ನೆಲೆ ಗೀತಾ ಅಶೋಕ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಹಲವು ಬಾರಿ ಮನವಿಗಳನ್ನು ಕೊಟ್ಟಿದ್ದರಿಂದ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆ 8:30, ಮಧ್ಯಾಹ್ನ 12, ಸಂಜೆ 4 ಹಾಗೂ 7ಗಂಟೆ ಸಮಯದಲ್ಲಿ ಈ ಬಸ್ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುದ್ದುಕೃಷ್ಣಪ್ಪ, ಹನುಮಂತರಾಯಪ್ಪ, ಪುರುಷೋತ್ತಮ, ಅಶೋಕ್ ಕುಮಾರ್, ನಟರಾಜ್, ಬಾಬು, ಶಿವಕುಮಾರ್, ಶಿವರಾಜ್, ಮುನಿರಾಜ್, ಕನಕರಾಜ್ ಸೇರಿದಂತೆ ಇತರರು ಇದ್ದರು.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…