ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ ಸಂತಸ ಎದ್ದು ಕಾಣುವಂತಾಗಿದೆ. ದೊಡ್ಡಬಳ್ಳಾಪುರದಿಂದ ತೂಬಗೆರೆಗೆ ಹೋಗುವ ಎಲ್ಲಾ ಬಸ್ ಗಳು ಹಾಡೋನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದವು. ಲಕ್ಷ್ಮೀದೇವಿಪುರ ಗ್ರಾಮದ ಜನತೆ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬಸ್ ಹಿಡಿಯಬೇಕಿತ್ತು. ಈ ಹಿನ್ನೆಲೆ ಗೀತಾ ಅಶೋಕ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಹಲವು ಬಾರಿ ಮನವಿಗಳನ್ನು ಕೊಟ್ಟಿದ್ದರಿಂದ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆ 8:30, ಮಧ್ಯಾಹ್ನ 12, ಸಂಜೆ 4 ಹಾಗೂ 7ಗಂಟೆ ಸಮಯದಲ್ಲಿ ಈ ಬಸ್ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುದ್ದುಕೃಷ್ಣಪ್ಪ, ಹನುಮಂತರಾಯಪ್ಪ, ಪುರುಷೋತ್ತಮ, ಅಶೋಕ್ ಕುಮಾರ್, ನಟರಾಜ್, ಬಾಬು, ಶಿವಕುಮಾರ್, ಶಿವರಾಜ್, ಮುನಿರಾಜ್, ಕನಕರಾಜ್ ಸೇರಿದಂತೆ ಇತರರು ಇದ್ದರು.
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…