ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ ಸಂತಸ ಎದ್ದು ಕಾಣುವಂತಾಗಿದೆ. ದೊಡ್ಡಬಳ್ಳಾಪುರದಿಂದ ತೂಬಗೆರೆಗೆ ಹೋಗುವ ಎಲ್ಲಾ ಬಸ್ ಗಳು ಹಾಡೋನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದವು. ಲಕ್ಷ್ಮೀದೇವಿಪುರ ಗ್ರಾಮದ ಜನತೆ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬಸ್ ಹಿಡಿಯಬೇಕಿತ್ತು. ಈ ಹಿನ್ನೆಲೆ ಗೀತಾ ಅಶೋಕ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಹಲವು ಬಾರಿ ಮನವಿಗಳನ್ನು ಕೊಟ್ಟಿದ್ದರಿಂದ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆ 8:30, ಮಧ್ಯಾಹ್ನ 12, ಸಂಜೆ 4 ಹಾಗೂ 7ಗಂಟೆ ಸಮಯದಲ್ಲಿ ಈ ಬಸ್ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುದ್ದುಕೃಷ್ಣಪ್ಪ, ಹನುಮಂತರಾಯಪ್ಪ, ಪುರುಷೋತ್ತಮ, ಅಶೋಕ್ ಕುಮಾರ್, ನಟರಾಜ್, ಬಾಬು, ಶಿವಕುಮಾರ್, ಶಿವರಾಜ್, ಮುನಿರಾಜ್, ಕನಕರಾಜ್ ಸೇರಿದಂತೆ ಇತರರು ಇದ್ದರು.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…