ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ ಸಂತಸ ಎದ್ದು ಕಾಣುವಂತಾಗಿದೆ. ದೊಡ್ಡಬಳ್ಳಾಪುರದಿಂದ ತೂಬಗೆರೆಗೆ ಹೋಗುವ ಎಲ್ಲಾ ಬಸ್ ಗಳು ಹಾಡೋನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದವು. ಲಕ್ಷ್ಮೀದೇವಿಪುರ ಗ್ರಾಮದ ಜನತೆ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬಸ್ ಹಿಡಿಯಬೇಕಿತ್ತು. ಈ ಹಿನ್ನೆಲೆ ಗೀತಾ ಅಶೋಕ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಹಲವು ಬಾರಿ ಮನವಿಗಳನ್ನು ಕೊಟ್ಟಿದ್ದರಿಂದ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆ 8:30, ಮಧ್ಯಾಹ್ನ 12, ಸಂಜೆ 4 ಹಾಗೂ 7ಗಂಟೆ ಸಮಯದಲ್ಲಿ ಈ ಬಸ್ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುದ್ದುಕೃಷ್ಣಪ್ಪ, ಹನುಮಂತರಾಯಪ್ಪ, ಪುರುಷೋತ್ತಮ, ಅಶೋಕ್ ಕುಮಾರ್, ನಟರಾಜ್, ಬಾಬು, ಶಿವಕುಮಾರ್, ಶಿವರಾಜ್, ಮುನಿರಾಜ್, ಕನಕರಾಜ್ ಸೇರಿದಂತೆ ಇತರರು ಇದ್ದರು.
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…