ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ ಸಂತಸ ಎದ್ದು ಕಾಣುವಂತಾಗಿದೆ. ದೊಡ್ಡಬಳ್ಳಾಪುರದಿಂದ ತೂಬಗೆರೆಗೆ ಹೋಗುವ ಎಲ್ಲಾ ಬಸ್ ಗಳು ಹಾಡೋನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದವು. ಲಕ್ಷ್ಮೀದೇವಿಪುರ ಗ್ರಾಮದ ಜನತೆ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬಸ್ ಹಿಡಿಯಬೇಕಿತ್ತು. ಈ ಹಿನ್ನೆಲೆ ಗೀತಾ ಅಶೋಕ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಹಲವು ಬಾರಿ ಮನವಿಗಳನ್ನು ಕೊಟ್ಟಿದ್ದರಿಂದ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆ 8:30, ಮಧ್ಯಾಹ್ನ 12, ಸಂಜೆ 4 ಹಾಗೂ 7ಗಂಟೆ ಸಮಯದಲ್ಲಿ ಈ ಬಸ್ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುದ್ದುಕೃಷ್ಣಪ್ಪ, ಹನುಮಂತರಾಯಪ್ಪ, ಪುರುಷೋತ್ತಮ, ಅಶೋಕ್ ಕುಮಾರ್, ನಟರಾಜ್, ಬಾಬು, ಶಿವಕುಮಾರ್, ಶಿವರಾಜ್, ಮುನಿರಾಜ್, ಕನಕರಾಜ್ ಸೇರಿದಂತೆ ಇತರರು ಇದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…