ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ ಸಂತಸ ಎದ್ದು ಕಾಣುವಂತಾಗಿದೆ. ದೊಡ್ಡಬಳ್ಳಾಪುರದಿಂದ ತೂಬಗೆರೆಗೆ ಹೋಗುವ ಎಲ್ಲಾ ಬಸ್ ಗಳು ಹಾಡೋನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದವು. ಲಕ್ಷ್ಮೀದೇವಿಪುರ ಗ್ರಾಮದ ಜನತೆ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬಸ್ ಹಿಡಿಯಬೇಕಿತ್ತು. ಈ ಹಿನ್ನೆಲೆ ಗೀತಾ ಅಶೋಕ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಹಲವು ಬಾರಿ ಮನವಿಗಳನ್ನು ಕೊಟ್ಟಿದ್ದರಿಂದ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆ 8:30, ಮಧ್ಯಾಹ್ನ 12, ಸಂಜೆ 4 ಹಾಗೂ 7ಗಂಟೆ ಸಮಯದಲ್ಲಿ ಈ ಬಸ್ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುದ್ದುಕೃಷ್ಣಪ್ಪ, ಹನುಮಂತರಾಯಪ್ಪ, ಪುರುಷೋತ್ತಮ, ಅಶೋಕ್ ಕುಮಾರ್, ನಟರಾಜ್, ಬಾಬು, ಶಿವಕುಮಾರ್, ಶಿವರಾಜ್, ಮುನಿರಾಜ್, ಕನಕರಾಜ್ ಸೇರಿದಂತೆ ಇತರರು ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…