Categories: ಕೋಲಾರ

ಅಂಬಿಗರ ಚೌಡಯ್ಯ ಶೋಷಿತರ ಧ್ವನಿಯಾಗಿದ್ದರು: ಊರಬಾಗಿಲು ಶ್ರೀನಿವಾಸ್

ಕೋಲಾರ: ಅಂಬಿಗರ ಚೌಡಯ್ಯ ಅವರು ಶೋಷಿತರ ಧ್ವನಿಯಾಗಿ ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಮಹಾನ್ ವಚನಕಾರ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸರಳವಾಗಿ ನಡೆದ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಬಸವಣ್ಣನವರ ಹಾದಿಯಲ್ಲಿಯೇ ಕಾಯಕ ನಿಷ್ಠೆಯಿಂದ ಬಂದಿದ್ದಾರೆ. ಸಮಾಜಿಕವಾಗಿ ಬದಲಾವಣೆಯಾದರೆ ಮಾತ್ರವೇ ದೇಶದಲ್ಲಿ ರಾಮರಾಜ್ಯ ತರಲು ಸಾಧ್ಯವಾಗುತ್ತದೆ. ಜಾತಿ ಅಭಿಮಾನ ಇರಲಿ, ದುರಾಭಿಮಾನ ಬೇಡ, ಇಂತಹ ಮಹಾತ್ಮರ ಜಯಂತಿಯನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡದೇ ಎಲ್ಲಾ ವರ್ಗದವರು ಒಗ್ಗೂಡಿ ಆಚರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕೆ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಅಂಬಿಗರ ಚೌಡಯ್ಯನವರು ಕೇವಲ ಗಂಗಾಮತ ಸಮಾಜಕ್ಕೆ ಸೀಮಿತರಾದವರಲ್ಲ. ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಇಂಥವರ ವಿಚಾರಧಾರೆಗಳನ್ನು ಯುವಕರಿಗೆ ತಿಳಿಸಬೇಕಾಗಿದೆ ಸಮಾಜದ ಏಳಿಗೆಗೆ ಶಿಕ್ಷಣ ಅಗತ್ಯ ಪಾಲಕರು ಮಕ್ಕಳಿಗೆ ಶಿಕ್ಷಣ ನೀಡಬೇಕು ಯುವಕರು ಸಹ ಒಳ್ಳೆಯ ಗುಣ ಬೆಳೆಸಿಕೊಳ್ಳಬೇಕು ಅಂಬೇಡ್ಕರ್, ಬಸವಣ್ಣ, ಅಂಬಿಗರ ಚೌಡಯ್ಯ ಹಾದಿಯಲ್ಲಿ ಅವರ ಆಶಯಗಳನ್ನು ಮೈಗೂಡಿಸಿಕೊಂಡು ಒಗ್ಗಟ್ಟಿನಿಂದ ಸಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಅಧ್ಯಕ್ಷ ಕೆ.ರಂಗನಾಥ್ ಮಾತನಾಡಿ ಹಿಂದಿನ ಕಾಲದಲ್ಲಿ ನದಿಯ ದಡವನ್ನು ದಾಟಲು ಯಾವುದೇ ಸೌಕರ್ಯಗಳಿರಲಿಲ್ಲ. ಅಂತಹ ಸಂದರ್ಭದಲ್ಲಿ ನದಿಯ ದಡವನ್ನು ಚೌಡಯ್ಯ ಸೇರಿಸುತ್ತಿದ್ದರು. ಅಂಬಿಗರು ನಂಬಿದವರ ಕೈಬಿಡುವುದಿಲ್ಲ ಅವತ್ತೇ ತೋರಿಸಿಕೊಟ್ಟಿದ್ದಾರೆ ಶರಣರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಗೌರವ ಸಲ್ಲಿಸಿದಂತಾಗುತ್ತದೆ. 800 ವರ್ಷಗಳ ಹಿಂದೆ, 12ನೇ ಶತಮಾನದಲ್ಲಿ ಸಮಾನತೆಯ ತತ್ವವನ್ನು ಜಗತ್ತಿಗೆ ಸಾರಿದ್ದಾರೆ ಹಿಂದೆ ಸಿದ್ದರಾಮಯ್ಯ ಸರಕಾರವು ಅಂಬಿಗರ ಚೌಡಯ್ಯ ಜಯಂತಿಯನ್ನು ಜಾರಿಗೆ ತಂದಿದ್ದಾರೆ ಎಂಬುದು ಹೆಮ್ಮೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್.ಟಿ ಘಟಕದ ಅಧ್ಯಕ್ಷ ನಾಗರಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿಯಪ್ಪ, ಮುಖಂಡರಾದ ಲಾಲ್ ಬಹಾದ್ದೂರ್ ಶಾಸ್ತ್ರಿ, ಅರಹಳ್ಳಿ ವಿಜಯಕುಮಾರ್, ಶ್ರೀನಿವಾಸ್, ನಾಗೇಶ್, ಮಿಲ್ಟ್ರಿ ರಾಮಣ್ಣ, ಜೋಗಮಾಲ್ ಮುಂತಾದವರು ಇದ್ದರು

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago