Categories: ಕೋಲಾರ

ಅಂಬಿಗರ ಚೌಡಯ್ಯ ಶೋಷಿತರ ಧ್ವನಿಯಾಗಿದ್ದರು: ಊರಬಾಗಿಲು ಶ್ರೀನಿವಾಸ್

ಕೋಲಾರ: ಅಂಬಿಗರ ಚೌಡಯ್ಯ ಅವರು ಶೋಷಿತರ ಧ್ವನಿಯಾಗಿ ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಮಹಾನ್ ವಚನಕಾರ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸರಳವಾಗಿ ನಡೆದ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಬಸವಣ್ಣನವರ ಹಾದಿಯಲ್ಲಿಯೇ ಕಾಯಕ ನಿಷ್ಠೆಯಿಂದ ಬಂದಿದ್ದಾರೆ. ಸಮಾಜಿಕವಾಗಿ ಬದಲಾವಣೆಯಾದರೆ ಮಾತ್ರವೇ ದೇಶದಲ್ಲಿ ರಾಮರಾಜ್ಯ ತರಲು ಸಾಧ್ಯವಾಗುತ್ತದೆ. ಜಾತಿ ಅಭಿಮಾನ ಇರಲಿ, ದುರಾಭಿಮಾನ ಬೇಡ, ಇಂತಹ ಮಹಾತ್ಮರ ಜಯಂತಿಯನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡದೇ ಎಲ್ಲಾ ವರ್ಗದವರು ಒಗ್ಗೂಡಿ ಆಚರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕೆ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಅಂಬಿಗರ ಚೌಡಯ್ಯನವರು ಕೇವಲ ಗಂಗಾಮತ ಸಮಾಜಕ್ಕೆ ಸೀಮಿತರಾದವರಲ್ಲ. ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಇಂಥವರ ವಿಚಾರಧಾರೆಗಳನ್ನು ಯುವಕರಿಗೆ ತಿಳಿಸಬೇಕಾಗಿದೆ ಸಮಾಜದ ಏಳಿಗೆಗೆ ಶಿಕ್ಷಣ ಅಗತ್ಯ ಪಾಲಕರು ಮಕ್ಕಳಿಗೆ ಶಿಕ್ಷಣ ನೀಡಬೇಕು ಯುವಕರು ಸಹ ಒಳ್ಳೆಯ ಗುಣ ಬೆಳೆಸಿಕೊಳ್ಳಬೇಕು ಅಂಬೇಡ್ಕರ್, ಬಸವಣ್ಣ, ಅಂಬಿಗರ ಚೌಡಯ್ಯ ಹಾದಿಯಲ್ಲಿ ಅವರ ಆಶಯಗಳನ್ನು ಮೈಗೂಡಿಸಿಕೊಂಡು ಒಗ್ಗಟ್ಟಿನಿಂದ ಸಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಅಧ್ಯಕ್ಷ ಕೆ.ರಂಗನಾಥ್ ಮಾತನಾಡಿ ಹಿಂದಿನ ಕಾಲದಲ್ಲಿ ನದಿಯ ದಡವನ್ನು ದಾಟಲು ಯಾವುದೇ ಸೌಕರ್ಯಗಳಿರಲಿಲ್ಲ. ಅಂತಹ ಸಂದರ್ಭದಲ್ಲಿ ನದಿಯ ದಡವನ್ನು ಚೌಡಯ್ಯ ಸೇರಿಸುತ್ತಿದ್ದರು. ಅಂಬಿಗರು ನಂಬಿದವರ ಕೈಬಿಡುವುದಿಲ್ಲ ಅವತ್ತೇ ತೋರಿಸಿಕೊಟ್ಟಿದ್ದಾರೆ ಶರಣರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಗೌರವ ಸಲ್ಲಿಸಿದಂತಾಗುತ್ತದೆ. 800 ವರ್ಷಗಳ ಹಿಂದೆ, 12ನೇ ಶತಮಾನದಲ್ಲಿ ಸಮಾನತೆಯ ತತ್ವವನ್ನು ಜಗತ್ತಿಗೆ ಸಾರಿದ್ದಾರೆ ಹಿಂದೆ ಸಿದ್ದರಾಮಯ್ಯ ಸರಕಾರವು ಅಂಬಿಗರ ಚೌಡಯ್ಯ ಜಯಂತಿಯನ್ನು ಜಾರಿಗೆ ತಂದಿದ್ದಾರೆ ಎಂಬುದು ಹೆಮ್ಮೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್.ಟಿ ಘಟಕದ ಅಧ್ಯಕ್ಷ ನಾಗರಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿಯಪ್ಪ, ಮುಖಂಡರಾದ ಲಾಲ್ ಬಹಾದ್ದೂರ್ ಶಾಸ್ತ್ರಿ, ಅರಹಳ್ಳಿ ವಿಜಯಕುಮಾರ್, ಶ್ರೀನಿವಾಸ್, ನಾಗೇಶ್, ಮಿಲ್ಟ್ರಿ ರಾಮಣ್ಣ, ಜೋಗಮಾಲ್ ಮುಂತಾದವರು ಇದ್ದರು

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago