Categories: ಕೋಲಾರ

ಅಂಬಿಗರ ಚೌಡಯ್ಯ ಶೋಷಿತರ ಧ್ವನಿಯಾಗಿದ್ದರು: ಊರಬಾಗಿಲು ಶ್ರೀನಿವಾಸ್

ಕೋಲಾರ: ಅಂಬಿಗರ ಚೌಡಯ್ಯ ಅವರು ಶೋಷಿತರ ಧ್ವನಿಯಾಗಿ ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಮಹಾನ್ ವಚನಕಾರ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸರಳವಾಗಿ ನಡೆದ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಬಸವಣ್ಣನವರ ಹಾದಿಯಲ್ಲಿಯೇ ಕಾಯಕ ನಿಷ್ಠೆಯಿಂದ ಬಂದಿದ್ದಾರೆ. ಸಮಾಜಿಕವಾಗಿ ಬದಲಾವಣೆಯಾದರೆ ಮಾತ್ರವೇ ದೇಶದಲ್ಲಿ ರಾಮರಾಜ್ಯ ತರಲು ಸಾಧ್ಯವಾಗುತ್ತದೆ. ಜಾತಿ ಅಭಿಮಾನ ಇರಲಿ, ದುರಾಭಿಮಾನ ಬೇಡ, ಇಂತಹ ಮಹಾತ್ಮರ ಜಯಂತಿಯನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡದೇ ಎಲ್ಲಾ ವರ್ಗದವರು ಒಗ್ಗೂಡಿ ಆಚರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕೆ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಅಂಬಿಗರ ಚೌಡಯ್ಯನವರು ಕೇವಲ ಗಂಗಾಮತ ಸಮಾಜಕ್ಕೆ ಸೀಮಿತರಾದವರಲ್ಲ. ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಇಂಥವರ ವಿಚಾರಧಾರೆಗಳನ್ನು ಯುವಕರಿಗೆ ತಿಳಿಸಬೇಕಾಗಿದೆ ಸಮಾಜದ ಏಳಿಗೆಗೆ ಶಿಕ್ಷಣ ಅಗತ್ಯ ಪಾಲಕರು ಮಕ್ಕಳಿಗೆ ಶಿಕ್ಷಣ ನೀಡಬೇಕು ಯುವಕರು ಸಹ ಒಳ್ಳೆಯ ಗುಣ ಬೆಳೆಸಿಕೊಳ್ಳಬೇಕು ಅಂಬೇಡ್ಕರ್, ಬಸವಣ್ಣ, ಅಂಬಿಗರ ಚೌಡಯ್ಯ ಹಾದಿಯಲ್ಲಿ ಅವರ ಆಶಯಗಳನ್ನು ಮೈಗೂಡಿಸಿಕೊಂಡು ಒಗ್ಗಟ್ಟಿನಿಂದ ಸಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಅಧ್ಯಕ್ಷ ಕೆ.ರಂಗನಾಥ್ ಮಾತನಾಡಿ ಹಿಂದಿನ ಕಾಲದಲ್ಲಿ ನದಿಯ ದಡವನ್ನು ದಾಟಲು ಯಾವುದೇ ಸೌಕರ್ಯಗಳಿರಲಿಲ್ಲ. ಅಂತಹ ಸಂದರ್ಭದಲ್ಲಿ ನದಿಯ ದಡವನ್ನು ಚೌಡಯ್ಯ ಸೇರಿಸುತ್ತಿದ್ದರು. ಅಂಬಿಗರು ನಂಬಿದವರ ಕೈಬಿಡುವುದಿಲ್ಲ ಅವತ್ತೇ ತೋರಿಸಿಕೊಟ್ಟಿದ್ದಾರೆ ಶರಣರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಗೌರವ ಸಲ್ಲಿಸಿದಂತಾಗುತ್ತದೆ. 800 ವರ್ಷಗಳ ಹಿಂದೆ, 12ನೇ ಶತಮಾನದಲ್ಲಿ ಸಮಾನತೆಯ ತತ್ವವನ್ನು ಜಗತ್ತಿಗೆ ಸಾರಿದ್ದಾರೆ ಹಿಂದೆ ಸಿದ್ದರಾಮಯ್ಯ ಸರಕಾರವು ಅಂಬಿಗರ ಚೌಡಯ್ಯ ಜಯಂತಿಯನ್ನು ಜಾರಿಗೆ ತಂದಿದ್ದಾರೆ ಎಂಬುದು ಹೆಮ್ಮೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್.ಟಿ ಘಟಕದ ಅಧ್ಯಕ್ಷ ನಾಗರಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿಯಪ್ಪ, ಮುಖಂಡರಾದ ಲಾಲ್ ಬಹಾದ್ದೂರ್ ಶಾಸ್ತ್ರಿ, ಅರಹಳ್ಳಿ ವಿಜಯಕುಮಾರ್, ಶ್ರೀನಿವಾಸ್, ನಾಗೇಶ್, ಮಿಲ್ಟ್ರಿ ರಾಮಣ್ಣ, ಜೋಗಮಾಲ್ ಮುಂತಾದವರು ಇದ್ದರು

Ramesh Babu

Journalist

Recent Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

2 hours ago

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…

5 hours ago

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

8 hours ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

16 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

1 day ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

1 day ago