Categories: ಕೋಲಾರ

ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಪ್ರಯುಕ್ತ ಚೈತ್ಯ ಭೂಮಿ ಚಲೋಗೆ ಚಾಲನೆ

ಕೋಲಾರ: ನಗರದ ನಚಿಕೇತನ ನಿಲಯದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ನೇತೃತ್ವದಲ್ಲಿ ಬಾಬಾಸಾಹೇಬ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕ್ಯಾಂಡಲ್ ಮೂಲಕ ಗೌರವ ಸಲ್ಲಿಸಿ ಚೈತ್ಯ ಭೂಮಿ ಚಲೋಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ರಾಜ್ಯ ಅಧ್ಯಕ್ಷ ಬೆಳತೂರು ವೆಂಕಟೇಶ್ ಮಾತನಾಡಿ ಅಂಬೇಡ್ಕರ್ ಅವರ ಆಶಯಗಳನ್ನು ನೆರವೇರಿಸಬೇಕಾಗಿರುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಅವರ ಪರಿನಿರ್ವಾಣ ದಿನದ ಅಂಗವಾಗಿ ಕೋರೆಗಾಂವ್ ಚಲೋ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ಬಾರಿ ಹಮ್ಮಿಕೊಳ್ಳಲಾಗಿದೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು

ಆಧುನಿಕ ಭಾರತದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದಲ್ಲಿ ಸಾಮಾಜಿಕ ಕ್ರಾಂತಿಯನ್ನು ಹುಟ್ಟುಹಾಕಿ ದಲಿತ ಸಮುದಾಯದ ಏಳಿಗೆಗಾಗಿ, ಸಮಾನತೆಗಾಗಿ ನಡೆಸಿದ ಚಿಂತನೆಗಳು, ಹೋರಾಟಗಳು ಚಿರಸ್ಮರಣೀಯವಾಗಿವೆ. ಅವರು ನಡೆದು ಬಂದ ಕಷ್ಟದ ದಾರಿಯಲ್ಲಿ ಇಡೀ ಭಾರತವೇ ಗುರುತಿಸುವ ವ್ಯಕ್ತಿಯಾಗಿ ಸಮಾಜದ ಹಿಂದುಳಿದವರ ದೀನ ದಲಿತರ ಸಮಗ್ರ ಅಭಿವೃದ್ಧಿಗೆ ಅವರು ಹಾಕಿ ಕೊಟ್ಟಿರುವ ಭದ್ರ ಬುನಾದಿಯ ಪರಿಣಾಮ ಇಂದು ದಲಿತರು ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ ಎಂದರು

ಈ ಸಂದರ್ಭದಲ್ಲಿ ಕೆ.ಆರ್.ಎಸ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ಮಾತನಾಡಿ ನ.21 ರಿಂದ ಡಿ.4 ರವರೆಗೆ ರಾಜ್ಯಾದ್ಯಂತ ಸಂಘಟನೆಯ ನೇತೃತ್ವದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ವಚ್ಚಗೊಳಿಸಿ ಮುಂಬೈಯ ಚೈತ್ಯ ಭೂಮಿಗೆ ಚಲೋ ಹಮ್ಮಿಕೊಳ್ಳಲಾಗಿದೆ ಅಂಬೇಡ್ಕರ್ ಅವರ ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ವಿಶ್ವದ ಬಹಳ ವಿಸ್ತಾರವಾದ ಅತಿ ದೊಡ್ಡ ಸಂವಿಧಾನ ರಚಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರದಾಗಿದೆ ಅವರ ಆದರ್ಶ ಆಶಯ, ಸಿದ್ಧಾಂತಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಂಟು ಆಟ್ಸ್ ರಾಮಚಂದ್ರ, ಸಂಘಟನಾ ಕಾರ್ಯದರ್ಶಿ ಮಂಜುನಾಥ್, ಮುಖಂಡರಾದ ಪಿವಿಸಿ ಮಣಿ, ಶಕುಂತಲಾ, ಮಂಜುಳಾ, ವರ್ತೂರು ನಾಗರಾಜ್, ತಿಪ್ಪಯ್ಯ ಮುಂತಾದವರು ಇದ್ದರು.

Ramesh Babu

Journalist

Recent Posts

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

21 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

22 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

1 day ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

2 days ago