Categories: ಕೋಲಾರ

ಅಂಬೇಡ್ಕರ್ ಆಶಯಗಳ ವಿರೋಧಿ ಅಮಿತ್ ಶಾರನ್ನ ಸಂಪುಟದಿಂದ ವಜಾಗೊಳಿಸಲು ಸೀಸಂದ್ರ ಗೋಪಾಲಗೌಡ ಒತ್ತಾಯ

ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಒತ್ತಾಯಿಸಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ದೇಶದಲ್ಲಿ ಸಂಘ ಪರಿವಾರವು ಮೊದಲಿನಿಂದಲೂ ಅಂಬೇಡ್ಕರ್ ವಿರೋಧಿ ಧೋರಣೆ ಅನುಸರಿಸಿಕೊಂಡು ಬಂದಿದ್ದಾರೆ. ಮತ್ತೊಮ್ಮೆ ಬಿಜೆಪಿ ನಿಜ ಬಣ್ಣದ ಜೊತೆಗೆ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅವರು ಯಾವತ್ತೂ ಅಂಬೇಡ್ಕರ್ ಅವರನ್ನು ಒಪ್ಪಿಕೊಳ್ಳುವುದಿಲ್ಲ. ಇಂತಹ ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು‌ ಅವರ ಆಶಯಗಳಿಗೆ ವಿರುದ್ಧವಾಗುತ್ತದೆ. ಹಾಗೂ ಭಾರತದ ಸಂವಿಧಾನದ ಮೂಲ ತತ್ವಗಳಿಗೆ ದಕ್ಕೆಯಾಗುತ್ತದೆ. ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿದರು.

ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಕೂಡ ಅಪಮಾನಗಳು ಸಂಘ ಪರಿವಾರದಿಂದ ನಡೆದಿತ್ತು. ಅವರ ಮಾತುಗಳು ಆಕಸ್ಮಿಕವೇನೂ ಅಲ್ಲ. ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿದೆ. ಅಮಿತ್ ಶಾ ಪ್ರತಿನಿಧಿಸುವ ಆರ್‌ಎಸ್‌ಎಸ್, ಜನಸಂಘ ಮತ್ತು ಬಿಜೆಪಿ ಭಾರತ ದೇಶವನ್ನು ಸಾರ್ವಭೌಮ ಸಮಾಜವಾದಿ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ಭಾರತದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ವಿರುದ್ಧವಾಗಿದೆ. ಅವರ ಅಂಬೇಡ್ಕರ್ ಬಗ್ಗೆ ಅತೃಪ್ತಿಯನ್ನು ಹೊರಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ. ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್‌ಎಸ್‌ಎಸ್ ಬಹಿರಂಗವಾಗಿಯೇ ಹೇಳಿಕೊಂಡಿದೆ. ಇಂತಹವರಿಗೆ ಚುನಾವಣೆಯ ಸಂದರ್ಭದಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

8 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago