Categories: ಕೋಲಾರ

ಅಂಬೇಡ್ಕರ್ ಆಶಯಗಳ ವಿರೋಧಿ ಅಮಿತ್ ಶಾರನ್ನ ಸಂಪುಟದಿಂದ ವಜಾಗೊಳಿಸಲು ಸೀಸಂದ್ರ ಗೋಪಾಲಗೌಡ ಒತ್ತಾಯ

ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಒತ್ತಾಯಿಸಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ದೇಶದಲ್ಲಿ ಸಂಘ ಪರಿವಾರವು ಮೊದಲಿನಿಂದಲೂ ಅಂಬೇಡ್ಕರ್ ವಿರೋಧಿ ಧೋರಣೆ ಅನುಸರಿಸಿಕೊಂಡು ಬಂದಿದ್ದಾರೆ. ಮತ್ತೊಮ್ಮೆ ಬಿಜೆಪಿ ನಿಜ ಬಣ್ಣದ ಜೊತೆಗೆ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅವರು ಯಾವತ್ತೂ ಅಂಬೇಡ್ಕರ್ ಅವರನ್ನು ಒಪ್ಪಿಕೊಳ್ಳುವುದಿಲ್ಲ. ಇಂತಹ ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು‌ ಅವರ ಆಶಯಗಳಿಗೆ ವಿರುದ್ಧವಾಗುತ್ತದೆ. ಹಾಗೂ ಭಾರತದ ಸಂವಿಧಾನದ ಮೂಲ ತತ್ವಗಳಿಗೆ ದಕ್ಕೆಯಾಗುತ್ತದೆ. ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿದರು.

ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಕೂಡ ಅಪಮಾನಗಳು ಸಂಘ ಪರಿವಾರದಿಂದ ನಡೆದಿತ್ತು. ಅವರ ಮಾತುಗಳು ಆಕಸ್ಮಿಕವೇನೂ ಅಲ್ಲ. ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿದೆ. ಅಮಿತ್ ಶಾ ಪ್ರತಿನಿಧಿಸುವ ಆರ್‌ಎಸ್‌ಎಸ್, ಜನಸಂಘ ಮತ್ತು ಬಿಜೆಪಿ ಭಾರತ ದೇಶವನ್ನು ಸಾರ್ವಭೌಮ ಸಮಾಜವಾದಿ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ಭಾರತದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ವಿರುದ್ಧವಾಗಿದೆ. ಅವರ ಅಂಬೇಡ್ಕರ್ ಬಗ್ಗೆ ಅತೃಪ್ತಿಯನ್ನು ಹೊರಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ. ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್‌ಎಸ್‌ಎಸ್ ಬಹಿರಂಗವಾಗಿಯೇ ಹೇಳಿಕೊಂಡಿದೆ. ಇಂತಹವರಿಗೆ ಚುನಾವಣೆಯ ಸಂದರ್ಭದಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

2 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

19 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

21 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

21 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

21 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

24 hours ago