ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಒತ್ತಾಯಿಸಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ದೇಶದಲ್ಲಿ ಸಂಘ ಪರಿವಾರವು ಮೊದಲಿನಿಂದಲೂ ಅಂಬೇಡ್ಕರ್ ವಿರೋಧಿ ಧೋರಣೆ ಅನುಸರಿಸಿಕೊಂಡು ಬಂದಿದ್ದಾರೆ. ಮತ್ತೊಮ್ಮೆ ಬಿಜೆಪಿ ನಿಜ ಬಣ್ಣದ ಜೊತೆಗೆ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅವರು ಯಾವತ್ತೂ ಅಂಬೇಡ್ಕರ್ ಅವರನ್ನು ಒಪ್ಪಿಕೊಳ್ಳುವುದಿಲ್ಲ. ಇಂತಹ ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಅವರ ಆಶಯಗಳಿಗೆ ವಿರುದ್ಧವಾಗುತ್ತದೆ. ಹಾಗೂ ಭಾರತದ ಸಂವಿಧಾನದ ಮೂಲ ತತ್ವಗಳಿಗೆ ದಕ್ಕೆಯಾಗುತ್ತದೆ. ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿದರು.
ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಕೂಡ ಅಪಮಾನಗಳು ಸಂಘ ಪರಿವಾರದಿಂದ ನಡೆದಿತ್ತು. ಅವರ ಮಾತುಗಳು ಆಕಸ್ಮಿಕವೇನೂ ಅಲ್ಲ. ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿದೆ. ಅಮಿತ್ ಶಾ ಪ್ರತಿನಿಧಿಸುವ ಆರ್ಎಸ್ಎಸ್, ಜನಸಂಘ ಮತ್ತು ಬಿಜೆಪಿ ಭಾರತ ದೇಶವನ್ನು ಸಾರ್ವಭೌಮ ಸಮಾಜವಾದಿ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ಭಾರತದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧವಾಗಿದೆ. ಅವರ ಅಂಬೇಡ್ಕರ್ ಬಗ್ಗೆ ಅತೃಪ್ತಿಯನ್ನು ಹೊರಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ. ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್ಎಸ್ಎಸ್ ಬಹಿರಂಗವಾಗಿಯೇ ಹೇಳಿಕೊಂಡಿದೆ. ಇಂತಹವರಿಗೆ ಚುನಾವಣೆಯ ಸಂದರ್ಭದಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…