Categories: ಕೋಲಾರ

ಅಂಬೇಡ್ಕರ್ ಆಶಯಗಳ ವಿರೋಧಿ ಅಮಿತ್ ಶಾರನ್ನ ಸಂಪುಟದಿಂದ ವಜಾಗೊಳಿಸಲು ಸೀಸಂದ್ರ ಗೋಪಾಲಗೌಡ ಒತ್ತಾಯ

ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಒತ್ತಾಯಿಸಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ದೇಶದಲ್ಲಿ ಸಂಘ ಪರಿವಾರವು ಮೊದಲಿನಿಂದಲೂ ಅಂಬೇಡ್ಕರ್ ವಿರೋಧಿ ಧೋರಣೆ ಅನುಸರಿಸಿಕೊಂಡು ಬಂದಿದ್ದಾರೆ. ಮತ್ತೊಮ್ಮೆ ಬಿಜೆಪಿ ನಿಜ ಬಣ್ಣದ ಜೊತೆಗೆ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅವರು ಯಾವತ್ತೂ ಅಂಬೇಡ್ಕರ್ ಅವರನ್ನು ಒಪ್ಪಿಕೊಳ್ಳುವುದಿಲ್ಲ. ಇಂತಹ ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು‌ ಅವರ ಆಶಯಗಳಿಗೆ ವಿರುದ್ಧವಾಗುತ್ತದೆ. ಹಾಗೂ ಭಾರತದ ಸಂವಿಧಾನದ ಮೂಲ ತತ್ವಗಳಿಗೆ ದಕ್ಕೆಯಾಗುತ್ತದೆ. ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿದರು.

ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಕೂಡ ಅಪಮಾನಗಳು ಸಂಘ ಪರಿವಾರದಿಂದ ನಡೆದಿತ್ತು. ಅವರ ಮಾತುಗಳು ಆಕಸ್ಮಿಕವೇನೂ ಅಲ್ಲ. ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿದೆ. ಅಮಿತ್ ಶಾ ಪ್ರತಿನಿಧಿಸುವ ಆರ್‌ಎಸ್‌ಎಸ್, ಜನಸಂಘ ಮತ್ತು ಬಿಜೆಪಿ ಭಾರತ ದೇಶವನ್ನು ಸಾರ್ವಭೌಮ ಸಮಾಜವಾದಿ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ಭಾರತದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ವಿರುದ್ಧವಾಗಿದೆ. ಅವರ ಅಂಬೇಡ್ಕರ್ ಬಗ್ಗೆ ಅತೃಪ್ತಿಯನ್ನು ಹೊರಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ. ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್‌ಎಸ್‌ಎಸ್ ಬಹಿರಂಗವಾಗಿಯೇ ಹೇಳಿಕೊಂಡಿದೆ. ಇಂತಹವರಿಗೆ ಚುನಾವಣೆಯ ಸಂದರ್ಭದಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago