ಕೋಲಾರ: ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿರುವ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಜ.3 ರಂದು ಶುಕ್ರವಾರ ಪ್ರಗತಿಪರ ಮತ್ತು ದಲಿತ ಸಂಘಟನೆಗಳು ಕರೆ ನೀಡಿರುವ ಕೋಲಾರ ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಪಕ್ಷವು ಬೆಂಬಲಿಸಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು
ದೇಶದಲ್ಲಿ ಬಿಜೆಪಿ ಪಕ್ಷದ ಸರ್ವಾಧಿಕಾರಿ ದೋರಣೆ ಹೆಚ್ಚಾಗಿದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಅಂಬೇಡ್ಕರ್ ಬಗ್ಗೆ ತುಚ್ಛವಾಗಿ ಮಾತನಾಡಿರುವ ಶಾ ದೇಶ ತಲೆ ತಗ್ಗಿಸುವ ರೀತಿ ವರ್ತಿಸಿದ್ದಾರೆ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಮಹಾತ್ಮ ಗಾಂಧಿಯವರ ಅಷ್ಟೇ ಸಾಮಾಜಿಕ ನ್ಯಾಯದ ಅಡಿಯಲ್ಲಿ ಸಂವಿಧಾನ ರಚನೆಕಾರ ಅಂಬೇಡ್ಕರ್ ಕೂಡ ಪ್ರಮುಖವಾಗಿದ್ದಾರೆ ಅಂತಹ ಬಗ್ಗೆ ಅವಹೇಳನ ಖಂಡನೀಯ ನಡೆ ನುಡಿ ಸರಿ ಇಲ್ಲದ ಬಿಜೆಪಿಯವರು ಸಂವಿಧಾನ ವಿರೋಧಿಗಳು ಎಂದು ಆರೋಪಿಸಿದರು.
ದೇಶದಲ್ಲಿ ಭಾಷೆ ಭಾಷೆ ನಡುವೆ ಕೋಮುಗಲಭೆಯ ಗಲಾಟೆಗಳು ಬಿಜೆಪಿಗೆ ಮುಖ್ಯವಾಗಿದೆ ಜನರ ಮನಸ್ಸುಗಳ ನಡುವೆ ತಂದಿಡುವ ಕೆಲಸ ಮಾಡುತ್ತಿದ್ದಾರೆ. ದೇಶವನ್ನು ಶಾಂತವಾಗಿ ನಡೆಸುವ ಶಕ್ತಿ ಇವರಿಗೆ ಇಲ್ಲ ಅಧಿಕಾರ ನಡೆಸಲು ಅವರು ಅನರ್ಹರು. ಅಮಿತ್ ಶಾ ನಾಯಕ ಅಲ್ಲ ಮೋದಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ನಡುವಿನ ಏಜೆಂಟ್ ಆಗಿದ್ದಾರೆ ಪ್ರಜಾಪ್ರಭುತ್ವ ದೇಗುವವಾದ ಸಂಸತ್ತು ಉದ್ವಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ಕೊಟ್ಟಿಲ್ಲ ಇಂತಹ ಸರಕಾರದ ವಿರುದ್ದ ನಡೆಯಲಿರುವ ಬಂದ್ ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮಾತನಾಡಿ ಪ್ರಗತಿಪರ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟಿದ್ದು ಜಿಲ್ಲಾ ಕಾಂಗ್ರೆಸ್ ನಿಂದ ಬೆಂಬಲ ಇರಲಿದೆನಾವು ಬೀದಿಗಳಲ್ಲಿ ತಿರುಗಾಡುತ್ತೇವೆ. ಶಾಂತಿಯುತವಾಗಿ ಬಂದ್ ಆಚರಣೆ ಮಾಡತ್ತೇವೆ ಸಂವಿಧಾನ ವಿರೋಧಿ ಅಮಿತ್ ಶಾ ಮೇಲೆ ಇಡೀ ಜನ ಆಕ್ರೋಶಗೊಂಡಿದ್ದಾರೆ. ಈ ಬಂದ್ ಗೆ ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು
ಕೋಲಾರ ಜಿಲ್ಲೆಯ ಜನತೆಗೆ ಹೊಸ ವರ್ಷದ ಸಂದರ್ಭದಲ್ಲಿ ಶುಭ ಸುದ್ದಿಯಾಗಿದ್ದು
ವೇಮಗಲ್ ನಿಂದ ಕೋಲಾರ ವರಗೆ ಆರು
ಪಥದ ರಸ್ತೆ ನಿರ್ಮಾಣವಾಗಲಿದ್ದು ಕೈಗಾರಿಕಾ ಕಾರಿಡಾರ್ ಗೆ ಸಂಪರ್ಕ ಒದಗಿಸಲಿದೆ ಇದಕ್ಕೆ ಈಗಾಗಲೇ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಸತೀಶ್ ಜಾರಕಿಹೊಳಿ ಸಹ ಅನುಮೋದನೆ ಸಿದ್ದರಾಗಿದ್ದಾರೆ ಎಂದು ತಿಳಿಸಿದರು
ಈ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಓಬಿಸಿ ಮಂಜುನಾಥ್, ಪದವೀಧರ ಘಟಕದ ಜಿಲ್ಲಾ ಅಧ್ಯಕ್ಷ ಟಿ.ಎಸ್ ಸುಧೀರ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ನಾಗರಾಜ್, ಲಾಲ್ ಬಹಾದ್ದೂರ್ ಶಾಸ್ತ್ರಿ, ಮಂಜುನಾಥ್, ನವೀನ್ ಇದ್ದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…